ಅರುಣ್‌ಜೇಟ್ಲಿ 
ದೇಶ

ಸಿಬಿಐ ಮುಖ್ಯಸ್ಥರ ನೇಮಕ ವಿಧೇಯಕಕ್ಕೆ ಸಂಸತ್ ಒಪ್ಪಿಗೆ

ಹಾಲಿ ಸಿಬಿಐ ನಿರ್ದೇಶಕರ ನಿವೃತ್ತಿಗೆ ಇನ್ನೇನು ಆರು ದಿನ ಬಾಕಿ...

ನವದೆಹಲಿ: ಹಾಲಿ ಸಿಬಿಐ ನಿರ್ದೇಶಕರ ನಿವೃತ್ತಿಗೆ ಇನ್ನೇನು ಆರು ದಿನ ಬಾಕಿ ಇರುವಾಗಲೇ ವಿವಾದಾತ್ಕ ದೆಹಲಿ ಪೊಲೀಸ್ ಸಂಸ್ಥೆ (ತಿದ್ದುಪಡಿ) ವಿಧೇಯಕಕ್ಕೆ ಸಂಸತ್ತಿನ ಅಂಗೀಕಾರ ಪಡೆಯುವಲ್ಲಿ ಸರ್ಕಾರ ಯಶಸ್ವಿಯಾಗಿದೆ.

ಈ ವಿಧೇಯಕದಂತೆ ಮುಂದಿನ ಸಿಬಿಐ ನಿರ್ದೇಶಕರ ಆಯ್ಕೆ ವೇಳೆ ಆಯ್ಕೆ ಸಮಿತಿಯಲ್ಲಿರುವ ಮೂವರೂ ಸದಸ್ಯರು ಹಾಜರಿರುವುದು ಕಡ್ಡಾಯವಲ್ಲ. ಸಿಬಿಐ ನಿರ್ದೇಶಕರ ಆಯ್ಕೆ ವೇಳೆ ಪ್ರತಿಪಕ್ಷ ನಾಯಕನ್ನು ಮೂಲೆಗುಂಪು ಮಾಡುವ ಉದ್ದೇಶದಿಂದಲೇ ಸರ್ಕಾರ ಈ ತಿದ್ದಪಡಿ ವಿಧೇಯಕ ಮಂಡಿಸಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.

ಈ ವಿಧೇಯಕವನ್ನು ಬೆಂಬಲಿಸಿ ರಾಜ್ಯ ಸಭೆಯಲ್ಲಿ ಮಾತನಾಡಿದ ವಿತ್ತ ಸಚಿವ ಅರುಣ್‌ಜೇಟ್ಲಿ, ಆಯ್ಕೆ ಸಮಿತಿಯಲ್ಲಿರುವ ಪ್ರಧಾನಿ, ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮತ್ತು ಪ್ರತಿಪಕ್ಷ ನಾಯಕ ಇವರಲ್ಲಿ ಒಬ್ಬ ಸದಸ್ಯರು ಗೈರು ಹಾಜರಾದರೂ ಸಿಬಿಐ ನಿರ್ದೇಶಕರ ನೇಮಕ ಪ್ರಕ್ರಿಯೆಗೆ ಅಡ್ಡಿಯಾಗಬಾರದು ಎನ್ನುವ ಕಾರಣಕ್ಕೆ ಈ ತಿದ್ದುಪಡಿ ವಿಧೇಯಕ ಮಂಡಿಸಲಾಗಿದೆ ಎಂದು ಸಮರ್ಥಿಸಿಕೊಂಡರು.

ಕಾಂಗ್ರೆಸ್‌ನ ವಿರೋಧದ ನಡುವೆಯೂ ಲೋಕಸಭೆಯಲ್ಲಿ ಬುಧವಾರ ವಿಧೇಯಕಕ್ಕೆ ಅಂಗೀಕಾರ ಪಡೆಯಲಾಗಿತ್ತು.

ತೆರಿಗೆ ವ್ಯವಸ್ಥೆ ಸುಧಾರಣೆ: ಜೇಟ್ಲಿ

ಹೂಡಿಕೆಗೆ ಪೂರಕವಾದ ವಾತಾವರಣ ಸೃಷ್ಟಿಸಲು ಭಾರತದಲ್ಲಿ ತೆರಿಗೆ ವ್ಯವಸ್ಥೆಯನ್ನು ಬದಲಾಯಿಸಲು ಸರ್ಕಾ ಹೊರಟಿದೆ. ವಿವಿಧ ತೆರಿಗೆಗಳಿಂದಾಗಿ ಹೊರ ದೇಶಗಳಲ್ಲಿ ಭಾರತದ ಕುರಿತು ಹೂಡಿಕೆದಾರರದಲ್ಲಿ ಮೂಡಿದ್ದ ಋುಣಾತ್ಮಕ ಭಾವನೆ ತೊಡೆದು ಹಾಕಲು ಸರ್ಕಾರ ಪ್ರಯತ್ನಿಸುತ್ತಿದೆ. ಈ ನಿಟ್ಟಿನಲ್ಲಿ ಹಂತ ಹಂತವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಕಪ್ಪುಹಣಕ್ಕೆ ಸಂಬಂಧಿಸಿದ ಚರ್ಚೆವೇಳೆ ಅರುಣ್‌ಜೇಟ್ಲಿ ಲೋಕಸಭೆಗೆ ತಿಳಿಸಿದ್ದಾರೆ.

ಹೆಚ್ಚಿನ ತೆರಿಗೆದರದಿಂದ ಹೆಚ್ಚಿನ ಆದಯ ಸಂಗ್ರಹವಾಗುತ್ತದೆ ಎನ್ನುವುದು ತಪ್ಪು ಕಲ್ಪನೆ. ನೇರ ಮತ್ತು ಪರೋಕ್ಷ ತೆರಿಗೆದರವನ್ನು ಸಮುಚಿತ ಹಂತಕ್ಕೆ ತರಬೇಕು. ಈ ಸಂದರ್ಭದಲ್ಲಿ ಸರ್ಕಾರಕ್ಕೆ ಆದಾಯ ಖೋತಾ ಆಗದಂತೆಯೂ ನೋಡಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಆಗ ಕಪ್ಪು ಕೊಡೆ, ಈಗ ಕಪ್ಪು ಶಾಲು: ಕಪ್ಪುಹಣಕ್ಕೆ ಸಂಬಂಧಿಸಿ ಸರ್ಕಾರದ ವಿರುದ್ಧದ ಪ್ರತಿಭಟನೆಯನ್ನು ತೃಣಮೂಲ ಕಾಂಗ್ರೆಸ್ ತೀವ್ರಗೊಳಿಸಿದೆ. ಮಂಗಳವಾರ ಲೋಕಸಭೆಯಲ್ಲಿ ಕಪ್ಪು ಕೊಡೆ ಪ್ರದಶಇರ್ಸಿದ್ದ ಪಕ್ಷದ ಸದಸ್ಯರು ಗುರುವಾರ ಕಪ್ಪು ಶಾಲು ಪ್ರದರ್ಶಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ಈ ವರ್ತನೆ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸ್ಪೀಕರ್ ಸುಮಿತ್ರಾ ಮಹಾಜನ್ ಶಿಸ್ತುಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

100 ದಿನದಲ್ಲಿ ಹಣ ತರುತ್ತೇವೆ ಎಂದು ಹೇಳಿಯೇ ಇಲ್ಲ: ನಾಯ್ಡು


100 ದಿನಗಳಲ್ಲಿ ಕಪ್ಪು ಹಣ ವಾಪಸ್ ತರುತ್ತೇವೆ ಎಂದು ನಾವು ಹೇಳಿಯೇ ಇಲ್ಲ. ಆ ರೀತಿ ಹೇಳುವಷ್ಟು ಅಪ್ರಬುದ್ಧರಲ್ಲ ನಾವು ಎಂದು ಕೇಂದ್ರ ಸಚಿವ ವೆಂಕಯ್ಯನಾಯ್ಡು ಲೋಕಸಭೆಗೆ ಸ್ಪಷ್ಟನೆ ನೀಡಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬಂದರೆ 100 ದಿನದಲ್ಲಿ ಕಪ್ಪು ಹಣ ವಾಪಸ್ ತರಲಾಗುತ್ತದೆ ಎನ್ನುವ ಭರವಸೆಯನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಮಾಡುತ್ತಿರುವ ಟೀಕೆಗೆ ಪ್ರತಿಕ್ರಿಯೆಯಾಗಿ ನಾಯ್ಡು ಈ ಉತ್ತರ ನೀಡಿದ್ದಾರೆ.

ಅಧಿಕಾರಕ್ಕೆ ಬಂದರೆ ಕಪ್ಪು ಹಣ ವಾಪಸ್ ತರಲು ಟಾಸ್ಕ್ ಪೋರ್ಸ್ ರಚಿಸುತ್ತೇವೆ ಹಾಗೂ ಭ್ರಷ್ಟಾಚಾರವನ್ನು ಕಡಿಮೆ ಮಾಡುತ್ತೇವೆ ಎಂದಷ್ಟೇ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದ್ದೆವು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel