ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ (ಸಂಗ್ರಹ ಚಿತ್ರ) 
ದೇಶ

ತೆರಿಗೆ ಪ್ರಕರಣದಲ್ಲಿ ಜಯಾಗೆ "ಕೇಂದ್ರ" ನೆರವು?

ತ.ನಾಡು ಮಾಜಿ ಸಿಎಂ ಜಯಲಲಿತಾ ಅವರಿಗೆ ಸಂಬಂಧಿಸಿದ ತೆರಿಗೆ ರಿಟರ್ನ್ಸ್ ಪ್ರಕರಣವೊಂದರಲ್ಲಿ ಸುಲಭ ಪರಿಹಾರ ಸಿಗುವ ಸಾಧ್ಯೆತೆಯಿದೆ.

ನವದೆಹಲಿ: ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿ ಇತ್ತೀಚೆಗಷ್ಟೇ ಜಾಮೀನು ಪಡೆದು ಕೊಂಚ ನಿರಾಳವಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರಿಗೆ ಸಂಬಂಧಿಸಿದ ತೆರಿಗೆ ರಿಟರ್ನ್ಸ್ ಪ್ರಕರಣವೊಂದರಲ್ಲಿ ಸುಲಭ ಪರಿಹಾರ ಸಿಗುವ ಸಾಧ್ಯೆತೆಯಿದೆ.

ಇಪ್ಪತ್ತು ವರ್ಷಗಳ ಹಿಂದೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸದ ವಿಚಾರವಾಗಿ ಜಯಲಲಿತಾ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ನ್ಯಾಯಾಲಯದ ಹೊರಗೆ ಇತ್ಯರ್ಥಗೊಳಿಸಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಎಂದು ಮೂಲಗಳು ತಿಳಿಸಿವೆ. 1991-92ರಲ್ಲಿ ಹಾಗೂ 1992-93ನೇ ಸಾಲಿನಲ್ಲಿ ಜಯಲಲಿತಾ ತೆರಿಗೆ ಪಾವತಿಸಿರಲಿಲ್ಲ. ಇದೇ ಪ್ರಕರಣದಲ್ಲಿ ಜಯಲಲಿತಾ ಗೆಳತಿ ಶಶಿಕಲಾ ನಟರಾಜನ್ ಅವರೂ ಆರೋಪಿಯಾಗಿದ್ದಾರೆ.

ಮೂಲಗಳ ಪ್ರಕಾರ , ಈ ಪ್ರಕರಣಕ್ಕೆ ಸಂಬಂಧಿಸಿ ಜಯಲಲಿತಾ ಕೇಂದ್ರ ಸರ್ಕಾರಕ್ಕೆ ಈ ಹಿಂದೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ಪ್ರಕರಣವನ್ನು ಮಾತುಕತೆ ಹಾಗೂ ಒಪ್ಪಂದದ ಮೂಲಕ ಇತ್ಯರ್ಥಗೊಳಿಸುವಂತೆ ಕೋರಿದ್ದರು. ಈ ಅರ್ಜಿಯನ್ನು ಪರಿಶೀಲಿಸಲು ಕಳೆದ ಆಗಸ್ಟ್‌ನಲ್ಲಿ ಕೇಂದ್ರ ಸರ್ಕಾರ ಸಮಿತಿಯೊಂದನ್ನು ನೇಮಿಸಿತ್ತು. ಸಮಿತಿ ಈ ಬಗ್ಗೆ ಚರ್ಚಿಸಿ, ಸಂಧಾನದ ಮೂಲಕ ಪ್ರಕರಣ ಇತ್ಯರ್ಥಗೊಳಿಸಲು ಹಸಿರು ನಿಶಾನೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT