ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶದಲ್ಲಿ ಭೀಕರ ಸುಂಟರಗಾಳಿಗೆ14 ಬಲಿ

ಕಳೆದೆರಡು ದಿನಗಳಿಂದ ಉತ್ತರ ಪ್ರದೇಶದಲ್ಲಿ ಬೀಸುತ್ತಿರುವ ಪ್ರಬಲ ಸುಂಟರಗಾಳಿಗೆ 14 ಮಂದಿ ಬಲಿಯಾಗಿದ್ದಾರೆ...

ಲಖನೌ: ಕಳೆದೆರಡು ದಿನಗಳಿಂದ ಉತ್ತರ ಪ್ರದೇಶದಲ್ಲಿ ಬೀಸುತ್ತಿರುವ ಪ್ರಬಲ ಸುಂಟರಗಾಳಿಗೆ 14 ಮಂದಿ ಬಲಿಯಾಗಿದ್ದಾರೆ.

ಲಖನೌ ಸೇರಿದಂತೆ ಇತರ ಪ್ರದೇಶದಲ್ಲಿ ಎರಡು ದಿನಗಳಿಂದ ನಿರಂತರವಾಗಿ ಪ್ರಬಲ ಸುಂಟರಗಾಳಿ ಆವರಿಸಿದ್ದು, ಘಟನೆಯಲ್ಲಿ ಈವರೆಗೆ 14 ಮಂದಿ ಸಾವನ್ನಪ್ಪಿದ್ದರು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅಲ್ಲದೇ ಲಖನೌನಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿದ್ಯುತ್‌ ಕಂಬಗಳು ಮತ್ತು ತಂತಿಗಳು ಹಾಗೂ 320ಕ್ಕೂ ಹೆಚ್ಚು ಜಾಹಿರಾತು ಫಲಕಗಳು ನೆಲಕ್ಕೆ ಉರುಳಿವೆ. ಕಳೆದ 20 ಗಂಟೆಗಳಿಂದ ಹಲವೆಡೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಿದೆ ಎಂದು ತಿಳಿದು ಬಂದಿದೆ.

ಉತ್ತರ ಪ್ರದೇಶದ ಹಲವೆಡೆ ಈಗ ಗೋಧಿ ಕಟಾವು ನಡೆಯುತ್ತಿದ್ದು, ಮಾವಿನ ಸೀಸನ್‌ ಕೂಡ ಪ್ರಾರಂಭವಾಗಿದೆ. ಸುಂಟರಗಾಳಿಯಿಂದ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಕಳೆವಾರವಷ್ಟೆ ಈ ಪ್ರದೇಶದಲ್ಲಿ ಆಲಿಕಲ್ಲು ಮಳೆ ಬಿದ್ದು, ಅರ್ಧದಷ್ಟು ಬೆಳೆ ನಾಶವಾಗಿತ್ತು, ಈಗ ಮತ್ತೆ ಸುಂಟರಗಾಳಿ ಅಪ್ಪಳಿಸಿದ್ದು, ರೈತರನ್ನು ಕಂಗಾಲಾಗುವಂತೆ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT