ದೆಹಲಿಯಲ್ಲಿ ಹೈ ಅಲರ್ಟ್ (ಸಂಗ್ರಹ ಚಿತ್ರ) 
ದೇಶ

ಉಗ್ರ ದಾಳಿ ಎಚ್ಚರಿಕೆ ಹಿನ್ನಲೆ: ದೆಹಲಿಯಲ್ಲಿ ಹೈ ಅಲರ್ಟ್

ರಾಷ್ಟ್ರ ರಾಜಧಾನಿ ದೆಹಲಿ ಮೇಲೆ ಉಗ್ರರು ದಾಳಿ ನಡೆಸುವ ಕುರಿತು ಗುಪ್ತಚರ ಮೂಲಗಳು ಎಚ್ಚರಿಕೆ ನೀಡಿರುವ ಹಿನ್ನಲೆಯಲ್ಲಿ ದೆಹಲಿಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ....

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮೇಲೆ ಉಗ್ರರು ದಾಳಿ ನಡೆಸುವ ಕುರಿತು ಗುಪ್ತಚರ ಮೂಲಗಳು ಎಚ್ಚರಿಕೆ ನೀಡಿರುವ ಹಿನ್ನಲೆಯಲ್ಲಿ ದೆಹಲಿಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಇತ್ತೀಚೆಗೆ ಸಾಂಬಾ ಸೆಕ್ಟರ್ ನಲ್ಲಿ ಉಗ್ರರು ನಡೆಸಿದ್ದ ದಾಳಿ ಮಾದರಿಯಲ್ಲಿಯೇ ದೆಹಲಿ ಮೇಲೆ ದಾಳಿ ಮಾಡುವ ಕುರಿತು ಕೇಂದ್ರೀಯ ಗುಪ್ತಚರ ಸಂಸ್ಥೆ ಕೇಂದ್ರ ಗೃಹ ಇಲಾಖೆಗೆ ಎಚ್ಚರಿಕೆ ನೀಡಿದೆ. ಹೀಗಾಗಿ ದೆಹಲಿಯಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ಪ್ರಮುಖ ರಸ್ತೆಗಳಲ್ಲಿ ನಾಕಾಬಂದಿ ವಿಧಿಸಲಾಗಿದೆ.

ಕಳೆದ ವಾರ ಪಾಕಿಸ್ತಾನ ವ್ಯಾಪ್ತಿಯ ಸಾಂಬಾ ಸೆಕ್ಟರ್ ನಲ್ಲಿ ಉಗ್ರರು ಭೀಕರ ದಾಳಿ ನಡೆಸಿದ್ದರು. ಟ್ರಕ್ ವೊಂದರಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ತುಂಬಿ ಅದನ್ನು ಸೇನಾ ಕಟ್ಟಡವೊಂದಕ್ಕೆ ನುಗ್ಗಿಸಿದ್ದರು. ಬಳಿಕ ಪಾಕ್ ಯೋಧರನ್ನು ಗುರಿಯಾಗಿಸಿಕೊಂಡು ಮನಸೋ ಇಚ್ಛೆ ಗುಂಡಿನ ಮಳೆಗರೆದಿದ್ದರು. ಇದೇ ಮಾದರಿಯಲ್ಲಿ ದೆಹಲಿಯಲ್ಲಿ ದಾಳಿ ನಡೆಯುವ ಕುರಿತು ಗುಪ್ತಚರ ಇಲಾಖೆಗಳು ಎಚ್ಚರಿಕೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ದೆಹಲಿಯಾದ್ಯಂತ ಹೈಅಲರ್ಟ್ ಘೋಷಣೆ ಮಾಡಲಾಗಿದ್ದು, ಸಂಸತ್ ಭವನ, ರಾಷ್ಟ್ರಪತಿ ಭವನ ಸೇರಿದಂತೆ ಸರ್ಕಾರಿ ಕಚೇರಿಗಳು, ಗಣ್ಯರ ನಿವಾಸಗಳು ಮತ್ತು ನ್ಯಾಯಾಲಯಗಳಿಗೆ ಬಿಗಿ ಭದ್ರತೆ ಒದಗಿಸಲಾಗಿದೆ.

ಕಳೆದ ಮಾರ್ಚ್ 21ರಂದು ಜೈಷ್ ಇ ಮೊಹಮದ್ ಎಂಬ ಉಗ್ರ ಸಂಘಟನೆಯ ಕೆಲ ಉಗ್ರರು ಸಾಂಬಾ ಸೆಕ್ಟರ್ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಉಗ್ರರಿಗೆ ತೀವ್ರ ಪ್ರತಿರೋಧ ಒಡ್ಡಿದ್ದ ಭಾರತೀಯ ಸೇನೆ ಉಗ್ರರನ್ನು ಹಿಮ್ಮೆಟಿಸುವಲ್ಲಿ ಯಶಸ್ವಿಯಾಗಿತ್ತು. ಆಗ ದೊರೆತ ಮಾಹಿತಿಯನ್ನಾಧರಿಸಿರುವ ಕೇಂದ್ರ ಗುಪ್ತಚರ ಇಲಾಖೆ ದೆಹಲಿಯಲ್ಲಿ ದಾಳಿ ನಡೆಯುವ ಕುರಿತು ಮಾಹಿತಿ ಕಲೆಹಾಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕ ಜಾಗತಿಕ ನಾವೀನ್ಯತೆ ತಾಣವಾಗಿ ಪರಿವರ್ತಿಸಲು ಮೂರು ನೀತಿ ಅನಾವರಣಗೊಳಿಸಿದ ಸಿಎಂ

'Glad Was In Audience': ಮತ್ತೆ ಪ್ರಧಾನಿಯನ್ನು ಹಾಡಿ ಹೊಗಳಿದ ಶಶಿ ತರೂರ್, ಗುಲಾಮ ಮನಸ್ಥಿತಿ ಕುರಿತ ಹೇಳಿಕೆ, ಕಾಂಗ್ರೆಸ್ ಕೆಂಡ!

'ವಾರಕ್ಕೆ 72 ಗಂಟೆ ಕೆಲಸ, ಮನಸ್ಥಿತಿ ಬದಲಾಗಬೇಕು, ಪ್ರಧಾನಿ ಮೋದಿ ಆದರ್ಶ': ಚೀನಾ ಹಿಂದಿಕ್ಕಲು ಇನ್ಫೋಸಿಸ್ ನಾರಾಯಣ ಮೂರ್ತಿ '9,9,6' ಸೂತ್ರ!

Delhi blast: ಸ್ಫೋಟಕ್ಕೂ ಮುನ್ನ 'ಆತ್ಮಾಹುತಿ ಬಾಂಬ್ ದಾಳಿ' ಬಗ್ಗೆ ಮಾತಾಡಿದ ಡಾ. ಉಮರ್; ವಿಡಿಯೋದಲ್ಲಿ ಉಗ್ರ ಹೇಳಿದ್ದೇನು?

'ಬೆಂಗಳೂರು ಟೆಕ್ ಸಮ್ಮಿಟ್ 2025'ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

SCROLL FOR NEXT