ಪ್ರಧಾನಿ ನರೇಂದ್ರ ಮೋದಿ 
ದೇಶ

ರಾಜಕಾರಣಿಗಳು ನ್ಯಾಯಾಂಗದಲ್ಲಿ ಮೂಗು ತೂರಿಸಬಾರದು: ಪ್ರಧಾನಿ ಮೋದಿ

ನ್ಯಾಯಾಂಗ ವ್ಯವಸ್ಥೆಯಲ್ಲಿ ರಾಜಕಾರಣಿಗಳಾಗಲಿ ಅಥವಾ ಜನಪ್ರತಿನಿಧಿಗಳಾಗಲಿ ಮೂಗು ತೂರಿಸಬಾರದು ಎಂದು ಪ್ರಧಾನಿ...

ನವದೆಹಲಿ: ನ್ಯಾಯಾಂಗ ವ್ಯವಸ್ಥೆಯಲ್ಲಿ ರಾಜಕಾರಣಿಗಳಾಗಲಿ ಅಥವಾ ಜನಪ್ರತಿನಿಧಿಗಳಾಗಲಿ ಮೂಗು ತೂರಿಸಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ದೆಹಲಿಯ ವಿಜ್ಞಾನ ಭವನದಲ್ಲಿ ಇಂದು ನಡೆದ ಅಖಿಲ ಭಾರತ ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ಹಾಗೂ ಮುಖ್ಯಮಂತ್ರಿಗಳ ಸಮಾವೇಶದಲ್ಲಿ  ಪಾಲ್ಗೊಂಡು ಮಾತನಾಡಿದ ಅವರು, ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಸಮಗ್ರ ಮತ್ತು ಪರಿಣಾಮಕಾರಿ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಹೇಳಿದರು.

ನಮಗೆ ಇಂದು ಸಮರ್ಥ, ದಕ್ಷ ಹಾಗೂ ಸಶಕ್ತ ನ್ಯಾಯಾಂಗ ವ್ಯವಸ್ಥೆಯ ಅವಶ್ಯಕತೆಯಿದ್ದು, ನ್ಯಾಯಾಂಗದಲ್ಲಿ ಒಳ್ಳೆಯ ಜನರೇ ಭಾಗವಹಿಸಬೇಕು. ನೀವು ಈ ದೇಶದ ಭವಿಷ್ಯದ ಜನಾಂಗವನ್ನು ರೂಪಿಸುವವರು. ದೇವರು ನಿಮ್ಮ ಮೂಲಕ ಈ ಕೆಲಸ ಮಾಡಿಸುತ್ತಿದ್ದಾನೆ. ಆದ್ದರಿಂದ ನೀವು ಸರಿಯಾದ ಮಾರ್ಗದಲ್ಲೇ ನಡೆಯಬೇಕಾಗುತ್ತದೆ. ಈ ದೇಶದ ಕೋಟ್ಯಂತರ ಜನತೆ ನಿಮ್ಮ ಮೇಲೆ ಅಪಾರ ನಂಬಿಕೆ-ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದು, ಜನತೆಯ ಆ ನಂಬಿಕೆ, ನಿರೀಕ್ಷೆಗಳು ಹುಸಿಯಾಗದಂತೆ ನೀವು ನಡೆದುಕೊಳ್ಳಬೇಕು.

ನ್ಯಾಯಾಧೀಶರೆಂದರೆ ದೇವರು, ನ್ಯಾಯಾಲಯ ಎಂದರೆ ದೇವಾಲಯಗಳು ಎಂದೇ ಜನ ನಂಬಿದ್ದಾರೆ. ಅವರ ನಂಬಿಕೆಗೆ ತಕ್ಕಂತೆ ನ್ಯಾಯಾಲಯಗಳಲ್ಲಿ ಅವರಿಗೆ  ನ್ಯಾಯ ಒದಗಿಸಿಕೊಡುವ ಗುರುತರ ಜವಾಬ್ದಾರಿ ನಿಮ್ಮ ಹೆಗಲ ಮೇಲಿದೆ. ಯಾವುದೇ ಕಾರಣಕ್ಕೂ ನ್ಯಾಯದಾನದಲ್ಲಿ ವಿಳಂಬವಾಗಬಾರದು ಮತ್ತು ಅನ್ಯಾಯವಾಗಬಾರದು. ಜನರ ನಿರೀಕ್ಷೆ, ನಂಬಿಕೆಗಳು ಹುಸಿಯಾದರೆ, ನ್ಯಾಯಾಂಗ ವ್ಯವಸ್ಥೆಯೇ ಹಾಳಾಗಿ ಹೋಗುತ್ತದೆ ಎಂದು ಮೋದಿ ಹೇಳಿದರು.

ಇದೇ ವೇಳೆ ನ್ಯಾಯಾಂಗದಲ್ಲಿ ಗುಣಾತ್ಮಕ ಬದಲಾವಣೆ ತರುವ ಅಗತ್ಯವಿದ್ದು, ರಾಜಕಾರಣಿಗಳಾಗಲಿ ಅಥವಾ ಜನಪ್ರತಿನಿಧಿಗಳಾಗಲಿ ಇದರಲ್ಲಿ ಮೂಗು ತೂರಿಸಬಾರದು ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT