ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮತ್ತು ಮುಖ್ಯಮಂತ್ರಿಗಳ ಸಮಾವೇಶದಲ್ಲಿ ಪ್ರಧಾನಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ 
ದೇಶ

ನ್ಯಾಯಾಧಿಕರಣಗಳ ಔಚಿತ್ಯ ಪ್ರಶ್ನಿಸಿದ ಪ್ರಧಾನಿ

ನ್ಯಾಯಾಧಿಕರಣಗಳ ಕಾರ್ಯ ವೈಖರಿ ಕುರಿತು ಪ್ರಧಾನಿ ನರೇಂದ್ರ ಮೋದಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ದೆಹಲಿಯಲ್ಲಿ...

ನವದೆಹಲಿ: ನ್ಯಾಯಾಧಿಕರಣಗಳ ಕಾರ್ಯ ವೈಖರಿ ಕುರಿತು ಪ್ರಧಾನಿ ನರೇಂದ್ರ ಮೋದಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ದೆಹಲಿಯಲ್ಲಿ ಆಯೋಜಿಸಲಾಗಿದ್ದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮತ್ತು ಮುಖ್ಯಮಂತ್ರಿಗಳ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ, ನ್ಯಾಯಾಧಿಕರಣಗಳು ನ್ಯಾಯ ನೀಡುವ ಪ್ರಕ್ರಿಯೆಗೆ ಪೂರಕ ವಾಗಿವೆಯೋ ಅಥವಾ ಅಡ್ಡಿಯಾ ಗುತ್ತಿವೆಯೋ  ಎನ್ನುವ ಕುರಿತು ಚಿಂತನೆ ನಡೆಸುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಪರಾಮರ್ಶೆ ನಡೆಸಿ

ನ್ಯಾಯಾಧೀಕರಣ ಕುರಿತುಸುಪ್ರೀಂಕೋರ್ಟ್ ಹಿರಿಯ ನ್ಯಾಯಾಧೀಶರೇ ಪರಾಮರ್ಶಿಸಬೇಕಿದೆ. ನ್ಯಾಯಾಧಿಕರಣಗಳು ಸಮರ್ಥವಾಗಿ ಕಾರ್ಯ ನಿರ್ವಹಿಸದಿದ್ದರೆ ಇವು ಗಳ ಹಣವನ್ನು ಕೋರ್ಟ್ ಗಳನ್ನು ಬಲಪಡಿಸಲು ಬಳಕೆ ಮಾಡುವುದೊಳಿತು ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.
ಇದೇ ಸಂದರ್ಭದಲ್ಲಿ ಕರ್ನಾಟಕದಲ್ಲಿ ಅಖಿಲ ಭಾರತ ನ್ಯಾಯಾಂಗ ಸೇವೆಗಳ ಸಂಸ್ಥೆ ಸೃಷ್ಟಿಗೆ ರಾಜ್ಯ ಸರ್ಕಾರ ಮತ್ತೆ ವಿರೋಧ ವ್ಯಕ್ತಪಡಿಸಿದೆ. ಜತೆಗೆ, ನ್ಯಾಯಾಂಗದಲ್ಲಿ ಸೌಲಭ್ಯಗಳ ಸುಧಾರಣೆಗೆ ಹೆಚ್ಚು ನೆರವಿಗಾಗಿ ಮನವಿ ಮಾಡಿದೆ. ನ್ಯಾಯಾಂಗ ಸೇವೆಗಳ ಸಂಸ್ಥೆ ಸ್ಥಾಪನೆ ಸಂಬಂಧ ರಾಜ್ಯದ ನಿಲುವನ್ನು ಕೇಂದ್ರ
ಕಾನೂನು ಸಚಿವಾಲಯಕ್ಕೆ ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT