ಅಶೋಕ್ ಗಜಪತಿರಾಜು 
ದೇಶ

ವಿಮಾನದಲ್ಲಿ ಬೆಂಕಿ ಪಟ್ಣ ಕೊಂಡೊಯ್ದರೇ ತಪ್ಪೇನು? ಸಚಿವ ಗಜಪತಿರಾಜು

ತಾನೊಬ್ಬ ಚೈನ್ ಸ್ಮೋಕರ್ ಎಂದು ಹೇಳಿಕೊಂಡಿರುವ ಕೇಂದ್ರ ವಿಮಾನಯಾನ ಸಚಿವ ಅಶೋಕ್ ಗಜಪತಿರಾಜು ಅವರು, ವಿಮಾನದಲ್ಲಿ ಪ್ರಯಾಣಿಸುವಾಗ...

ನವದೆಹಲಿ: ತಾನೊಬ್ಬ ಚೈನ್ ಸ್ಮೋಕರ್ ಎಂದು ಹೇಳಿಕೊಂಡಿರುವ ಕೇಂದ್ರ ವಿಮಾನಯಾನ ಸಚಿವ ಅಶೋಕ್ ಗಜಪತಿರಾಜು ಅವರು, ವಿಮಾನದಲ್ಲಿ ಪ್ರಯಾಣಿಸುವಾಗ ಬೆಂಕಿ ಪಟ್ಣ ಕೊಂಡೊಯ್ಯುವುದು ಮಹಾ ಅಪರಾಧವೇ ಎಂದು ಪ್ರಶ್ನಿಸಿದ್ದಾರೆ.

ದೆಹಲಿಯ ವಿಮಾನ ನಿಲ್ದಾಣದಲ್ಲಿ ಗಜಪತಿರಾಜು ಅವರ ಕಿಸೆಯಲ್ಲಿ ಬೆಂಕಿಪಟ್ಣ ಇರುವುದನ್ನು ಗಮನಿಸಿದ ಭದ್ರತಾ ಸಿಬ್ಬಂದಿ, ಅದನ್ನು ಪ್ರಶ್ನಿಸಿದ್ದರು. ಇದಕ್ಕೆ ಉಡಾಫೆ ಉತ್ತರ ಕೊಟ್ಟಿರುವ ಕೇಂದ್ರ ಸಚಿವರು, ನಾನೊಬ್ಬ ಚೈನ್ ಸ್ಮೋಕರ್. ಹೀಗಾಗಿ ನನ್ನೊಂದಿಗೆ ಬೆಂಕಿಪಟ್ಣವೂ ಬಂದಿದೆ. ಇದು ಮಹಾ ಪ್ರಮಾದವೇ ಎಂದಿದ್ದಾರೆ.

ಕೇವಲ ಬೆಂಕಿ ಪಟ್ಣದಿಂದ ವಿಮಾನ ಹೈಜಾಕ್ ಮಾಡಲು ಆಗಲ್ಲ. ಮ್ಯಾಚ್ ಬಾಕ್ಸ್‌ನಿಂದ ಇಂಥ ಘಟನೆ ವಿಶ್ವದ ಯಾವ ಭಾಗದಲ್ಲೂ ನಡೆದಿಲ್ಲ ಎಂದು ತಮ್ಮ ಕ್ರಮವನ್ನು ಸಮರ್ಥಸಿಕೊಂಡಿದ್ದಾರೆ.

ವಿಮಾನದೊಳಕ್ಕೆ ಬೆಂಕಿಪಟ್ಟಣ ತೆಗೆದುಕೊಂಡು ಹೋಗಬಾರದು ಎಂಬ ನಿಯಮವಿದೆ. ಆದರೆ ವಿಮಾನಯಾನ ಸಚಿವರಾಗಿ ನೀವೇ ಈ ಹೇಳಿದರೆ ಹೇಗೆ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಗಜಪತಿರಾಜು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ