ಅಶೋಕ್ ಗಜಪತಿರಾಜು 
ದೇಶ

ವಿಮಾನದಲ್ಲಿ ಬೆಂಕಿ ಪಟ್ಣ ಕೊಂಡೊಯ್ದರೇ ತಪ್ಪೇನು? ಸಚಿವ ಗಜಪತಿರಾಜು

ತಾನೊಬ್ಬ ಚೈನ್ ಸ್ಮೋಕರ್ ಎಂದು ಹೇಳಿಕೊಂಡಿರುವ ಕೇಂದ್ರ ವಿಮಾನಯಾನ ಸಚಿವ ಅಶೋಕ್ ಗಜಪತಿರಾಜು ಅವರು, ವಿಮಾನದಲ್ಲಿ ಪ್ರಯಾಣಿಸುವಾಗ...

ನವದೆಹಲಿ: ತಾನೊಬ್ಬ ಚೈನ್ ಸ್ಮೋಕರ್ ಎಂದು ಹೇಳಿಕೊಂಡಿರುವ ಕೇಂದ್ರ ವಿಮಾನಯಾನ ಸಚಿವ ಅಶೋಕ್ ಗಜಪತಿರಾಜು ಅವರು, ವಿಮಾನದಲ್ಲಿ ಪ್ರಯಾಣಿಸುವಾಗ ಬೆಂಕಿ ಪಟ್ಣ ಕೊಂಡೊಯ್ಯುವುದು ಮಹಾ ಅಪರಾಧವೇ ಎಂದು ಪ್ರಶ್ನಿಸಿದ್ದಾರೆ.

ದೆಹಲಿಯ ವಿಮಾನ ನಿಲ್ದಾಣದಲ್ಲಿ ಗಜಪತಿರಾಜು ಅವರ ಕಿಸೆಯಲ್ಲಿ ಬೆಂಕಿಪಟ್ಣ ಇರುವುದನ್ನು ಗಮನಿಸಿದ ಭದ್ರತಾ ಸಿಬ್ಬಂದಿ, ಅದನ್ನು ಪ್ರಶ್ನಿಸಿದ್ದರು. ಇದಕ್ಕೆ ಉಡಾಫೆ ಉತ್ತರ ಕೊಟ್ಟಿರುವ ಕೇಂದ್ರ ಸಚಿವರು, ನಾನೊಬ್ಬ ಚೈನ್ ಸ್ಮೋಕರ್. ಹೀಗಾಗಿ ನನ್ನೊಂದಿಗೆ ಬೆಂಕಿಪಟ್ಣವೂ ಬಂದಿದೆ. ಇದು ಮಹಾ ಪ್ರಮಾದವೇ ಎಂದಿದ್ದಾರೆ.

ಕೇವಲ ಬೆಂಕಿ ಪಟ್ಣದಿಂದ ವಿಮಾನ ಹೈಜಾಕ್ ಮಾಡಲು ಆಗಲ್ಲ. ಮ್ಯಾಚ್ ಬಾಕ್ಸ್‌ನಿಂದ ಇಂಥ ಘಟನೆ ವಿಶ್ವದ ಯಾವ ಭಾಗದಲ್ಲೂ ನಡೆದಿಲ್ಲ ಎಂದು ತಮ್ಮ ಕ್ರಮವನ್ನು ಸಮರ್ಥಸಿಕೊಂಡಿದ್ದಾರೆ.

ವಿಮಾನದೊಳಕ್ಕೆ ಬೆಂಕಿಪಟ್ಟಣ ತೆಗೆದುಕೊಂಡು ಹೋಗಬಾರದು ಎಂಬ ನಿಯಮವಿದೆ. ಆದರೆ ವಿಮಾನಯಾನ ಸಚಿವರಾಗಿ ನೀವೇ ಈ ಹೇಳಿದರೆ ಹೇಗೆ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಗಜಪತಿರಾಜು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT