ಸಂಸತ್ 
ದೇಶ

ಏ.23ರಿಂದ ಮೇ 13ರವರೆಗೆ ರಾಜ್ಯಸಭಾ ಕಲಾಪ

ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ವಿವಾದಿತ ಭೂ ಸ್ವಾಧೀನ ಮಸೂದೆ ಅಂಗೀಕಾರಕ್ಕಾಗಿ ಭಾರಿ ಸರ್ಕಸ್ ನಡೆಸುತ್ತಿದ್ದು, ಮಸೂದೆ ಅಂಗೀಕಾರಕ್ಕಾಗಿಯೇ ಏಪ್ರಿಲ್ 23ರಿಂದ ಮೇ 13ರ ವರೆಗೆ ವಿಶೇಷ ರಾಜ್ಯಸಭಾ ಅಧಿವೇಶನ ಕರೆದಿದೆ.

ಈಗಾಗಲೇ ಲೋಕಸಭೆಯಲ್ಲಿ ಅಂಗೀಕಾರವಾಗಿರುವ ಭೂ ಸ್ವಾಧೀನ ಮಸೂದೆ ಈಗ ರಾಜ್ಯಸಭೆಯಿಂದ ಅಂಗೀಕಾರ ಪಡೆಯುವುದಕ್ಕಾಗಿ ಏಪ್ರಿಲ್ 23ರಿಂದ ಮೇ 13ರವರೆಗೆ ರಾಜ್ಯಸಭಾ ಕಲಾಪಕ್ಕಾಗಿ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ ಮಂಗಳವಾರ ಸಿಫಾರಸು ಮಾಡಿದೆ.

ಬಜೆಟ್ ಅಧಿವೇಶನದ ವೇಳೆ ರಾಜ್ಯಸಭೆಯಲ್ಲಿ ಭೂ ಸ್ವಾಧೀನ ವಿಧೇಯಕಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಸರ್ಕಾರ ಈ ಸಂಬಂಧ ಹೊರಡಸಿದ್ದ ಸುಗ್ರೀವಾಜ್ಞೆಯನ್ನು ಹಿಂಪಡೆದಿದ್ದು, ಕೆಲವು ತಿದ್ದುಪಡಿಯ ನಂತರ ಮತ್ತೊಮ್ಮೆ ಸುಗ್ರೀವಾಜ್ಞೆ ಹೊರಡಿಸುವ ನಿರ್ಧಾರ ತೆಗೆದುಕೊಂಡಿದೆ.

ಭೂ ಸ್ವಾಧೀನ ಮಸೂದೆಗೆ 11 ತಿದ್ದುಪಡಿಗಳನ್ನು ಸೇರಿಸಲಾಗಿದ್ದು, ಒಟ್ಟಿನಲ್ಲಿ ಹೇಗಾದರೂ ಮಾಡಿ ಭೂ ಸ್ವಾಧೀನ ವಿಧೇಯಕಕ್ಕೆ ರಾಜ್ಯಸಭೆಯ ಅಂಗೀಕಾರ ಪಡೆಯುವುದು ಸರ್ಕಾರದ ಉದ್ದೇಶವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT