ಸಂಸತ್ 
ದೇಶ

ಏ.23ರಿಂದ ಮೇ 13ರವರೆಗೆ ರಾಜ್ಯಸಭಾ ಕಲಾಪ

ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ವಿವಾದಿತ ಭೂ ಸ್ವಾಧೀನ ಮಸೂದೆ ಅಂಗೀಕಾರಕ್ಕಾಗಿ ಭಾರಿ ಸರ್ಕಸ್ ನಡೆಸುತ್ತಿದ್ದು, ಮಸೂದೆ ಅಂಗೀಕಾರಕ್ಕಾಗಿಯೇ ಏಪ್ರಿಲ್ 23ರಿಂದ ಮೇ 13ರ ವರೆಗೆ ವಿಶೇಷ ರಾಜ್ಯಸಭಾ ಅಧಿವೇಶನ ಕರೆದಿದೆ.

ಈಗಾಗಲೇ ಲೋಕಸಭೆಯಲ್ಲಿ ಅಂಗೀಕಾರವಾಗಿರುವ ಭೂ ಸ್ವಾಧೀನ ಮಸೂದೆ ಈಗ ರಾಜ್ಯಸಭೆಯಿಂದ ಅಂಗೀಕಾರ ಪಡೆಯುವುದಕ್ಕಾಗಿ ಏಪ್ರಿಲ್ 23ರಿಂದ ಮೇ 13ರವರೆಗೆ ರಾಜ್ಯಸಭಾ ಕಲಾಪಕ್ಕಾಗಿ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ ಮಂಗಳವಾರ ಸಿಫಾರಸು ಮಾಡಿದೆ.

ಬಜೆಟ್ ಅಧಿವೇಶನದ ವೇಳೆ ರಾಜ್ಯಸಭೆಯಲ್ಲಿ ಭೂ ಸ್ವಾಧೀನ ವಿಧೇಯಕಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಸರ್ಕಾರ ಈ ಸಂಬಂಧ ಹೊರಡಸಿದ್ದ ಸುಗ್ರೀವಾಜ್ಞೆಯನ್ನು ಹಿಂಪಡೆದಿದ್ದು, ಕೆಲವು ತಿದ್ದುಪಡಿಯ ನಂತರ ಮತ್ತೊಮ್ಮೆ ಸುಗ್ರೀವಾಜ್ಞೆ ಹೊರಡಿಸುವ ನಿರ್ಧಾರ ತೆಗೆದುಕೊಂಡಿದೆ.

ಭೂ ಸ್ವಾಧೀನ ಮಸೂದೆಗೆ 11 ತಿದ್ದುಪಡಿಗಳನ್ನು ಸೇರಿಸಲಾಗಿದ್ದು, ಒಟ್ಟಿನಲ್ಲಿ ಹೇಗಾದರೂ ಮಾಡಿ ಭೂ ಸ್ವಾಧೀನ ವಿಧೇಯಕಕ್ಕೆ ರಾಜ್ಯಸಭೆಯ ಅಂಗೀಕಾರ ಪಡೆಯುವುದು ಸರ್ಕಾರದ ಉದ್ದೇಶವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ, ರಷ್ಯಾದ ಬಿಗ್ ವಾರ್ನಿಂಗ್ ಏನು?

'ಕುವೆಂಪು ನಾಡಕವಿಯಲ್ಲ, ರಾಷ್ಟ್ರಕವಿ': ಬಿ.ವೈ. ವಿಜಯೇಂದ್ರಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು!

SCROLL FOR NEXT