ಸಾಂದರ್ಭಿಕ ಚಿತ್ರ 
ದೇಶ

ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸಂಬಂಧಿ ಹತ್ಯೆ

ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸಂಬಂಧಿಯೊಬ್ಬರಿಗೆ ಕಿಡಿಗೇಡಿಗಳು ಗುಂಡು ಹಾರಿಸಿದ್ದು, ಸ್ಥಳದಲ್ಲೇ ಅವರು ಸಾವನ್ನಪ್ಪಿರುವ ಘಟನೆ ವಾರಣಾಸಿಯಲ್ಲಿ ಬುಧವಾರ ನಡೆದಿದೆ...

ಲಕನೌ: ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸಂಬಂಧಿಯೊಬ್ಬರಿಗೆ ಕಿಡಿಗೇಡಿಗಳು ಗುಂಡು ಹಾರಿಸಿದ್ದು, ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಾರಣಾಸಿಯಲ್ಲಿ ಬುಧವಾರ ನಡೆದಿದೆ.

ರಾಜನಾಥ್ ಸಿಂಗ್ ಸಂಬಂಧಿಯಾಗಿರುವ ಅರವಿಂದ್ ಸಿಂಗ್ ಅವರು ಪೆಟ್ರೋಲ್ ಬಂಕ್ ಮಾಲೀಕರಾಗಿದ್ದು, ಕಾರಿನಲ್ಲಿ ಏರ್ ಪೋರ್ಟ್ ಗೆ ಹೋಗಬೇಕಿದ್ದ ತಮ್ಮ ಪತ್ನಿಯನ್ನು ಡ್ರಾಪ್ ಮಾಡಿ ಪೂಲ್ಪುರದ ಮುಕ್ಸೂದನ್ ಪಟ್ಟಿ ಪ್ರದೇಶದ ಮೂಲಕ ಮನೆಗೆ ತೆರಳುತ್ತಿದ್ದರು.

ಈ ವೇಳೆ ಬೈಕ್ ನಲ್ಲಿ ಬಂದ ಮೂವರು ಅನಾಮಿಕ ವ್ಯಕ್ತಿಗಳಲ್ಲಿ ಒಬ್ಬರು ಬಲವಂತವಾಗಿ ಅರವಿಂದ್ ಸಿಂಗ್ ಅವರ ಕಾರನ್ನು ನಿಲ್ಲಿಸಿ ಕಾರಿನೊಳಗೆ ಹೋಗಿದ್ದಾನೆ. ನಂತರ ಅನಾವಶ್ಯಕವಾಗಿ ಅರವಿಂದ್ ಸಿಂಗ್ ಅವರೊಂದಿಗೆ ಮಾತಿನ ಜಗಳಕ್ಕಿಳಿದು, ಬಳಿಕ ಇದ್ದಕ್ಕಿದ್ದಂತೆ ಅರವಿಂದ್ ಸಿಂಗ್ ಅವರ ಮೇಲೆ ಗುಂಡು ಹಾರಿಸಿದ್ದಾನೆ. ಗುಂಡೇಟು ನೇರವಾಗಿ ಅರವಿಂದ್ ಸಿಂಗ್ ಅವರ ಕತ್ತಿಗೆಗೆ ಬಿದ್ದ ಕಾರಣ ಸ್ಥಳದಲ್ಲೇ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಇದೇ ಸಂದರ್ಭದಲ್ಲಿ ಕಸಹಾಕಲು ಬಂದಿದ್ದ ಓರ್ವ ಮಹಿಳೆ ಈ ದೃಶ್ಯವನ್ನು ಕಂಡು, ಗಾಬರಿಗೊಂಡು ಕೂಗಿದ್ದಾಳೆ. ಮಹಿಳೆಯ ಕೂಗು ಕೇಳಿಸಿಕೊಂಡ ಅನಾಮಿಕರು ಕೈಯಲ್ಲಿದ್ದ ಪಿಸ್ತೂಲನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳದಲ್ಲಿದ್ದ ಪಿಸ್ತೂಲ್ ಅನ್ನು ವಶಪಡಿಸಿಕೊಂಡಿದ್ದು, ಅರವಿಂದ್ ಸಿಂಗ್ ಅವರ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ.

ಪ್ರಕರಣದ ಕುರಿತಂತೆ ಈ ವರೆಗೂ ಯಾರೊಬ್ಬ ಆರೋಪಿಯೂ ದೊರಕಿಲ್ಲ. ತನಿಖೆ ಮುಂದುವರೆಯುತ್ತಿದೆ ಎಂದು ಪೊಲೀಸ್ ಆಯುಕ್ತ ಎ.ಕೆ.ಪಾಂಡೆ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT