ಮುದ್ರಾ ಬ್ಯಾಂಕ್‌ಗೆ ಚಾಲನೆ ನೀಡುತ್ತಿರುವ ಪ್ರಧಾನಿ ಮೋದಿ 
ದೇಶ

ಮೋದಿ ಸರ್ಕಾರದಿಂದ ರೈತರಿಗೆ ಬಂಪರ್ ಕೊಡುಗೆ, ಬೆಳೆಹಾನಿ ಪರಿಹಾರ ಶೇ.50ರಷ್ಟು ಹೆಚ್ಚಳ

ಸಂಕಷ್ಟದಲ್ಲಿರುವ ರೈತರ ರಕ್ಷಣೆಗೆ ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಬೆಳೆಹಾನಿ ಪರಿಹಾರದ ಮೊತ್ತವನ್ನು ಶೇ.50ರಷ್ಟು ಹೆಚ್ಚಿಸುವುದಾಗಿ ಬುಧವಾರ ಪ್ರಕಟಿಸಿದ್ದಾರೆ. ಅಲ್ಲದೆ ಬೆಳೆ...

ನವದೆಹಲಿ: ಸಂಕಷ್ಟದಲ್ಲಿರುವ ರೈತರ ರಕ್ಷಣೆಗೆ ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಬೆಳೆಹಾನಿ ಪರಿಹಾರದ ಮೊತ್ತವನ್ನು ಶೇ.50ರಷ್ಟು ಹೆಚ್ಚಿಸುವುದಾಗಿ ಬುಧವಾರ ಪ್ರಕಟಿಸಿದ್ದಾರೆ. ಅಲ್ಲದೆ ಬೆಳೆ ಹಾನಿಯ ಮಾನದಂಡವನ್ನು ಸಹ ಸುಲಭಗೊಳಿಸಿದ್ದಾರೆ.

ದೆಹಲಿಯಲ್ಲಿ 20 ಸಾವಿರ ಕೋಟಿ ರುಪಾಯಿ ಮೂಲ ಬಂಡವಾಳದ ಮುದ್ರಾ ಬ್ಯಾಂಕ್‌ಗೆ ಚಾಲನೆ ನೀಡಿ ಮಾತನಾಡಿದ ಮೋದಿ, ಅಕಾಲಿಕ ಮಳೆಯಿಂದ ಸಂಕಷ್ಟಕ್ಕೀಡಾಗುವ ರೈತರಿಗೆ ನೀಡುವ ಪರಿಹಾರದ ಪ್ರಮಾಣವನ್ನು ಹೆಚ್ಚಿಸುವ ಮಹತ್ವದ ನಿರ್ಧಾರವನ್ನು ನಾವು ತೆಗೆದುಕೊಂಡಿದ್ದೇವೆ ಎಂದರು.

ಪರಿಹಾರದ ಪ್ರಮಾಣವನ್ನು ಶೇ.5ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದ್ದು, ಇದರಿಂದ 100 ರುಪಾಯಿ ಪರಿಹಾರ ಪಡೆಯುತ್ತಿದ್ದ ರೈತರು ಇನ್ನುಮುಂದೆ 150 ರುಪಾಯಿ ಪರಿಹಾರ ಪಡೆಯಲಿದ್ದಾರೆ. ಮೊದಲು 1 ಲಕ್ಷ ಪರಿಹಾರ ಪಡೆಯುತ್ತಿದ್ದರೆ ಈಗ 1.5 ಲಕ್ಷ ಪರಿಹಾರ ಪಡೆಯಲಿದ್ದಾರೆ ಎಂದು ತಿಳಿಸಿದರು.

ಸರ್ಕಾರದ ಪರಿಹಾರ ಪಡೆಯಲು ಈ ಮೊದಲಿನ ಶೇ 50ರಷ್ಟು ಬೆಳೆಹಾನಿ ನಿಯಮವನ್ನು ಶೇ 33ಕ್ಕೆ ತಗ್ಗಿಸಲಾಗಿದೆ. ಇದರಿಂದ ಹೆಚ್ಚಿನ ರೈತರಿಗೆ ನೆರವಾಗಲಿದೆ’ ಎಂದು ಪ್ರಧಾನಿ ಹೇಳಿದರು.

ಈ ನಿಯಮ ಸಡಿಲಿಕೆಯಿಂದಾಗಿ ಸುಮಾರು 14 ರಾಜ್ಯಗಳಲ್ಲಿ ಅಕಾಲಿಕ ಮಳೆಯಿಂದ ಹಾನಿಗೊಂಡ 120 ಲಕ್ಷ ಹೆಕ್ಟೇರ್ ಪ್ರದೇಶಗಳ ರೈತರಿಗೆ ಅನುಕೂಲವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT