ಮುದ್ರಾ ಬ್ಯಾಂಕ್‌ಗೆ ಚಾಲನೆ ನೀಡುತ್ತಿರುವ ಪ್ರಧಾನಿ ಮೋದಿ 
ದೇಶ

ಮೋದಿ ಸರ್ಕಾರದಿಂದ ರೈತರಿಗೆ ಬಂಪರ್ ಕೊಡುಗೆ, ಬೆಳೆಹಾನಿ ಪರಿಹಾರ ಶೇ.50ರಷ್ಟು ಹೆಚ್ಚಳ

ಸಂಕಷ್ಟದಲ್ಲಿರುವ ರೈತರ ರಕ್ಷಣೆಗೆ ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಬೆಳೆಹಾನಿ ಪರಿಹಾರದ ಮೊತ್ತವನ್ನು ಶೇ.50ರಷ್ಟು ಹೆಚ್ಚಿಸುವುದಾಗಿ ಬುಧವಾರ ಪ್ರಕಟಿಸಿದ್ದಾರೆ. ಅಲ್ಲದೆ ಬೆಳೆ...

ನವದೆಹಲಿ: ಸಂಕಷ್ಟದಲ್ಲಿರುವ ರೈತರ ರಕ್ಷಣೆಗೆ ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಬೆಳೆಹಾನಿ ಪರಿಹಾರದ ಮೊತ್ತವನ್ನು ಶೇ.50ರಷ್ಟು ಹೆಚ್ಚಿಸುವುದಾಗಿ ಬುಧವಾರ ಪ್ರಕಟಿಸಿದ್ದಾರೆ. ಅಲ್ಲದೆ ಬೆಳೆ ಹಾನಿಯ ಮಾನದಂಡವನ್ನು ಸಹ ಸುಲಭಗೊಳಿಸಿದ್ದಾರೆ.

ದೆಹಲಿಯಲ್ಲಿ 20 ಸಾವಿರ ಕೋಟಿ ರುಪಾಯಿ ಮೂಲ ಬಂಡವಾಳದ ಮುದ್ರಾ ಬ್ಯಾಂಕ್‌ಗೆ ಚಾಲನೆ ನೀಡಿ ಮಾತನಾಡಿದ ಮೋದಿ, ಅಕಾಲಿಕ ಮಳೆಯಿಂದ ಸಂಕಷ್ಟಕ್ಕೀಡಾಗುವ ರೈತರಿಗೆ ನೀಡುವ ಪರಿಹಾರದ ಪ್ರಮಾಣವನ್ನು ಹೆಚ್ಚಿಸುವ ಮಹತ್ವದ ನಿರ್ಧಾರವನ್ನು ನಾವು ತೆಗೆದುಕೊಂಡಿದ್ದೇವೆ ಎಂದರು.

ಪರಿಹಾರದ ಪ್ರಮಾಣವನ್ನು ಶೇ.5ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದ್ದು, ಇದರಿಂದ 100 ರುಪಾಯಿ ಪರಿಹಾರ ಪಡೆಯುತ್ತಿದ್ದ ರೈತರು ಇನ್ನುಮುಂದೆ 150 ರುಪಾಯಿ ಪರಿಹಾರ ಪಡೆಯಲಿದ್ದಾರೆ. ಮೊದಲು 1 ಲಕ್ಷ ಪರಿಹಾರ ಪಡೆಯುತ್ತಿದ್ದರೆ ಈಗ 1.5 ಲಕ್ಷ ಪರಿಹಾರ ಪಡೆಯಲಿದ್ದಾರೆ ಎಂದು ತಿಳಿಸಿದರು.

ಸರ್ಕಾರದ ಪರಿಹಾರ ಪಡೆಯಲು ಈ ಮೊದಲಿನ ಶೇ 50ರಷ್ಟು ಬೆಳೆಹಾನಿ ನಿಯಮವನ್ನು ಶೇ 33ಕ್ಕೆ ತಗ್ಗಿಸಲಾಗಿದೆ. ಇದರಿಂದ ಹೆಚ್ಚಿನ ರೈತರಿಗೆ ನೆರವಾಗಲಿದೆ’ ಎಂದು ಪ್ರಧಾನಿ ಹೇಳಿದರು.

ಈ ನಿಯಮ ಸಡಿಲಿಕೆಯಿಂದಾಗಿ ಸುಮಾರು 14 ರಾಜ್ಯಗಳಲ್ಲಿ ಅಕಾಲಿಕ ಮಳೆಯಿಂದ ಹಾನಿಗೊಂಡ 120 ಲಕ್ಷ ಹೆಕ್ಟೇರ್ ಪ್ರದೇಶಗಳ ರೈತರಿಗೆ ಅನುಕೂಲವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT