ಅಮಿತಾಭ್ ಬಚ್ಚನ್ ಗೆ ಪದ್ಮವಿಭೂಷಣ ಪ್ರದಾನ ಮಾಡಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ 
ದೇಶ

ಅಮಿತಾಭ್ ಬಚ್ಚನ್ ಗೆ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಬಾಲಿವುಡ್ ಖ್ಯಾತ ನಟ ಅಮಿತಾಭ್ ಬಚ್ಚನ್ ಅವರಿಗೆ ಪದ್ಮವಿಭೂಷಣ ಪ್ರಶಸ್ತಿಯನ್ನುಬುಧವಾರ ಪ್ರದಾನ ಮಾಡಿದ್ದಾರೆ.

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಪದ್ಮ ವಿಭೂಷಣ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯುತ್ತಿದ್ದು, ಬಾಲಿವುಡ್ ಖ್ಯಾತ ನಟ ಅಮಿತಾಭ್ ಬಚ್ಚನ್ ಅವರಿಗೆ ರಾಷ್ಟ್ರದ ಅತ್ಯುನ್ನತ ನಾಗರೀಕ ಪ್ರಶಸ್ತಿಯಾಗಿರುವ ಪದ್ಮವಿಭೂಷಣ ಪ್ರಶಸ್ತಿಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಬುಧವಾರ ಪ್ರದಾನ ಮಾಡಿದ್ದಾರೆ.

ಕಲಾ ಕ್ಷೇತ್ರದಲ್ಲಿ ತಮ್ಮ ಚಾಪು ಮೂಡಿಸಿರುವ ಅಮಿತಾಭ್ ಬಚ್ಚನ್ ಅವರನ್ನು ದೇಶದ ಎರಡನೇ ಅತ್ಯುನ್ನತ ವ್ಯಕ್ತಿ ಎಂದು ಪರಿಗಣಿಸಿ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿಯನ್ನು ನೀಡಲಾಗಿದ್ದು. ಇವರ ಜೊತೆಗೆ ಇತರೆ 8 ಮಂದಿಗೂ ಕೂಡ ಪ್ರದ್ಮ ವಿಭೂಷಣ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

ಇದರಂತೆ ಸಾಮಾಜಿಕ ಸೇವೆ ಪರಿಗಣಿಸಿ ರಾಜ್ಯದ ಮತ್ತೋರ್ವ ಸಾಧಕರಾಗಿರುವ ನಡೆದಾಡುವ ದೇವರು ಎಂದು ಖ್ಯಾತಿಗಳಿಸಿರುವ ತುಮಕೂರಿನ ಸಿದ್ದಗಂಗಾ ಮಠದ ಶ್ರೀಗಳಾದ ಪೀಠಾಧ್ಯಕ್ಷ ಶಿವಕುಮಾರ ಸ್ವಾಮಿ ಅವರಿಗೂ ಕೂಡ ಪ್ರಶಸ್ತಿ ಲಭಿಸಿದೆ. ಆದರೆ ಪ್ರಶಸ್ತಿ ಸ್ವೀಕರಿಸಲು ನವದೆಹಲಿಯವರೆಗೂ ಶಿವಕುಮಾರ ಸ್ವಾಮಿ ಅವರು ಹೋಗಲು ಸಾಧ್ಯವಾಗಿಲ್ಲ. ಹಾಗಾಗಿ ಸಮಾರಂಭದಲ್ಲಿ ಶಿವಕುಮಾರ ಸ್ವಾಮೀಜಿಗಳು ಭಾಗವಿಹಿಸಿರಲಿಲ್ಲ ಎನ್ನಲಾಗುತ್ತಿದೆ. ಶ್ರೀಗಳ ಪರವಾಗಿಯೂ ಯಾರೊಬ್ಬರೂ ಪ್ರಶಸ್ತಿಯನ್ನು ಸ್ವೀಕರಿಸಲು ಹೋಗಿಲ್ಲ.

ಪ್ರಶಸ್ತಿ ಸಮಾರಂಭದಲ್ಲಿ ಸಾರ್ವಜನಿಕ ಸೇವೆಗಾಗಿ ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್, ವೀರೇಂದ್ರ ಹೆಗ್ಗಡೆ ಹಾಗೂ ಉದ್ಯಮ ಕ್ಷೇತ್ರದ ಸಾಧನೆಗಾಗಿ ಉದ್ಯಮಿ ಬಿಲ್ ಗೇಟ್ಸ್, ಕಲಾಕ್ಷೇತ್ರದ ಮತ್ತೊಬ್ಬ ವ್ಯಕ್ತಿಯಾದ ಹಿಂದಿ ಭಾಷೆಯ ಖ್ಯಾತ ನಟ ದಿಲೀಪ್ ಕುಮಾರ್ ಅವರಿಗೂ ಪ್ರಶಸ್ತಿ ನೀಡಿ ಗೌರವ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT