ವಿ.ಕೆ. ಸಿಂಗ್ 
ದೇಶ

ಜ.ವಿ.ಕೆ.ಸಿಂಗ್ ಹೊಸ ವಿವಾದ

ವಿದೇಶಾಂಗ ವ್ಯವಹಾರಗಳ ಸಚಿವ ವಿ.ಕೆ. ಸಿಂಗ್ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ಯೆಮೆನ್‍ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣಾ ಕಾರ್ಯವನ್ನು ...

ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ವಿ.ಕೆ. ಸಿಂಗ್ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ಯೆಮೆನ್‍ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣಾ ಕಾರ್ಯವನ್ನು ಹಗುರವಾಗಿ ಕಾಣುವಂಥ ಹೇಳಿಕೆ ನೀಡಿದ್ದಾರೆ ಎನ್ನುವ ಆರೋಪ ಈಗ ಅವರ ವಿರುದ್ಧ ಕೇಳಿ ಬಂದಿದೆ. ಯೆಮೆನ್‍ನ `ಆಪರೇಷನ್ ರಾಹತ್' ಒಂದು ಕ್ಲಿಷ್ಟಕರ ಕಾರ್ಯಾಚರಣೆ. ಆದರೆ, ಪಾಕಿಸ್ತಾನದ ರಾಯಭಾರ ಕಚೇರಿಗೆ ಭೇಟಿ ಕೊಟ್ಟಾಗ ಆಗುವಷ್ಟು ಉದ್ವೇಗ ಈ ಕಾರ್ಯಾಚರಣೆ ವೇಳೆ ಆಗುತ್ತಿಲ್ಲ ಎಂದು ಸಿಂಗ್ ಹೇಳಿದ್ದಾರೆ. ಈ ಹೇಳಿಕೆ ಕುರಿತು ಪ್ರತಿಪಕ್ಷಗಳಿಂದ ತೀವ್ರ ಆಕ್ರೋಶ ವ್ಯಕ್ತವಾ ಗಿದೆ. ಈ ಹಿಂದೆ ಪಾಕ್ ರಾಜ ತಾಂತ್ರಿಕ ಕಚೇರಿಯಲ್ಲಿ ಆಯೋಜಿಸಿದ್ದಪಾಕ್ ರಾಷ್ಟ್ರೀಯ ದಿನಾಚರಣೆಯಲ್ಲಿ  ಪಾಲ್ಗೊಂಡು ಸಿಂಗ್ ವಿವಾದ ಸೃಷ್ಟಿಸಿದ್ದರು. ಇದೇ ವೇಳೆ, ವಿವಾದಿತ ಹೇಳಿಕೆಯನ್ನು ಪ್ರಸಾರ ಮಾಡಿದ ಮಾಧ್ಯಮಗಳ ವಿರುದ್ಧ ಹರಿಹಾಯ್ದಿರುವ ವಿ.ಕೆ.ಸಿಂಗ್, ಮಾಧ್ಯಮ ಗಳೆಲ್ಲ `ಪ್ರೆಸ್‍ಟಿಟ್ಯೂಟ್'ಗಳು ಎಂದು ಕರೆ ಯುವ ಮೂಲಕ ಮತ್ತೊಂದು ಅನಪೇಕ್ಷಿತ ಹೇಳಿಕೆ ನೀಡಿದ್ದಾರೆ. ಸಿಂಗ್ ಅವರ ಭಾಷೆ ಅವರ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತಿದೆ.
ಇಂತಹ ಹೇಳಿಕೆಯನ್ನು ಒಪ್ಪಲು ಸಾಧ್ಯವೇ ಇಲ್ಲ ಎಂದು ಪ್ರತಿಪಕ್ಷಗಳು ಹೇಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!