ವಿ.ಕೆ. ಸಿಂಗ್ 
ದೇಶ

ಜ.ವಿ.ಕೆ.ಸಿಂಗ್ ಹೊಸ ವಿವಾದ

ವಿದೇಶಾಂಗ ವ್ಯವಹಾರಗಳ ಸಚಿವ ವಿ.ಕೆ. ಸಿಂಗ್ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ಯೆಮೆನ್‍ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣಾ ಕಾರ್ಯವನ್ನು ...

ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ವಿ.ಕೆ. ಸಿಂಗ್ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ಯೆಮೆನ್‍ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣಾ ಕಾರ್ಯವನ್ನು ಹಗುರವಾಗಿ ಕಾಣುವಂಥ ಹೇಳಿಕೆ ನೀಡಿದ್ದಾರೆ ಎನ್ನುವ ಆರೋಪ ಈಗ ಅವರ ವಿರುದ್ಧ ಕೇಳಿ ಬಂದಿದೆ. ಯೆಮೆನ್‍ನ `ಆಪರೇಷನ್ ರಾಹತ್' ಒಂದು ಕ್ಲಿಷ್ಟಕರ ಕಾರ್ಯಾಚರಣೆ. ಆದರೆ, ಪಾಕಿಸ್ತಾನದ ರಾಯಭಾರ ಕಚೇರಿಗೆ ಭೇಟಿ ಕೊಟ್ಟಾಗ ಆಗುವಷ್ಟು ಉದ್ವೇಗ ಈ ಕಾರ್ಯಾಚರಣೆ ವೇಳೆ ಆಗುತ್ತಿಲ್ಲ ಎಂದು ಸಿಂಗ್ ಹೇಳಿದ್ದಾರೆ. ಈ ಹೇಳಿಕೆ ಕುರಿತು ಪ್ರತಿಪಕ್ಷಗಳಿಂದ ತೀವ್ರ ಆಕ್ರೋಶ ವ್ಯಕ್ತವಾ ಗಿದೆ. ಈ ಹಿಂದೆ ಪಾಕ್ ರಾಜ ತಾಂತ್ರಿಕ ಕಚೇರಿಯಲ್ಲಿ ಆಯೋಜಿಸಿದ್ದಪಾಕ್ ರಾಷ್ಟ್ರೀಯ ದಿನಾಚರಣೆಯಲ್ಲಿ  ಪಾಲ್ಗೊಂಡು ಸಿಂಗ್ ವಿವಾದ ಸೃಷ್ಟಿಸಿದ್ದರು. ಇದೇ ವೇಳೆ, ವಿವಾದಿತ ಹೇಳಿಕೆಯನ್ನು ಪ್ರಸಾರ ಮಾಡಿದ ಮಾಧ್ಯಮಗಳ ವಿರುದ್ಧ ಹರಿಹಾಯ್ದಿರುವ ವಿ.ಕೆ.ಸಿಂಗ್, ಮಾಧ್ಯಮ ಗಳೆಲ್ಲ `ಪ್ರೆಸ್‍ಟಿಟ್ಯೂಟ್'ಗಳು ಎಂದು ಕರೆ ಯುವ ಮೂಲಕ ಮತ್ತೊಂದು ಅನಪೇಕ್ಷಿತ ಹೇಳಿಕೆ ನೀಡಿದ್ದಾರೆ. ಸಿಂಗ್ ಅವರ ಭಾಷೆ ಅವರ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತಿದೆ.
ಇಂತಹ ಹೇಳಿಕೆಯನ್ನು ಒಪ್ಪಲು ಸಾಧ್ಯವೇ ಇಲ್ಲ ಎಂದು ಪ್ರತಿಪಕ್ಷಗಳು ಹೇಳಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT