ಝಕಿ ಉರ್ ರೆಹಮಾನ್ ಲಖ್ವಿ 
ದೇಶ

ಉಗ್ರ ಲಖ್ವಿ ಜೈಲಿನಿಂದ ಹೊರ ಬರದಂತೆ ಪಾಕ್ ಕ್ರಮ ಕೈಗೊಳ್ಳಬೇಕು: ಭಾರತ

ಮುಂಬೈ ದಾಳಿಯ ಪ್ರಮುಖ ರೂವಾರಿ, ಲಷ್ಕರ್-ಎ-ತೋಯ್ಬಾ ಉಗ್ರ ಸಂಘಟನೆಯ ಮುಖ್ಯಸ್ಥ ಝಕಿ ಉರ್ ರೆಹಮಾನ್ ಲಖ್ವಿ ಬಿಡುಗಡೆಗೆ ಪಾಕಿಸ್ತಾನ ಕೋರ್ಟ್ ಆದೇಶಿಸರುವ ಬಗ್ಗೆ ಭಾರತ ತೀವ್ರ ತೀವ್ರ...

ನವದೆಹಲಿ: ಮುಂಬೈ ದಾಳಿಯ ಪ್ರಮುಖ ರೂವಾರಿ, ಲಷ್ಕರ್-ಎ-ತೋಯ್ಬಾ ಉಗ್ರ ಸಂಘಟನೆಯ ಮುಖ್ಯಸ್ಥ ಝಕಿ ಉರ್ ರೆಹಮಾನ್ ಲಖ್ವಿ ಬಿಡುಗಡೆಗೆ ಪಾಕಿಸ್ತಾನ ಕೋರ್ಟ್ ಆದೇಶಿಸರುವ ಬಗ್ಗೆ ಭಾರತ ತೀವ್ರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೆ ಉಗ್ರ ಲಖ್ವಿ ಜೈಲಿನಿಂದ ಹೊರ ಬರದಂತೆ ಪಾಕ್ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.

ಲಖ್ವಿಯನ್ನು ತಕ್ಷಣವೇ ಜೈಲಿನಿಂದ ಬಿಡುಗಡೆ ಮಾಡಬೇಕು ಎಂದು ಲಾಹೋರ್ ಕೋರ್ಟ್ ಆದೇಶಿಸಿದ ಕೆಲವೇ ಗಂಟೆಗಳಲ್ಲಿ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳು, ಈ ಬೆಳವಣಿಗೆಯಿಂದ ತೀವ್ರ ನಿರಾಶೆಯಾಗಿದೆ ಎಂದಿದ್ದಾರೆ.

ಮುಂಬೈ ದಾಳಿಯ ರೂವಾರಿ ಜೈಲಿನಿಂದ ಹೊರ ಬರದಂತೆ ನೋಡಿಕೊಳ್ಳಲು ಬೇಕಾದ ಎಲ್ಲಾ ರೀತಿಯ ಕಾನೂನು ಕ್ರಮಗಳನ್ನು ಪಾಕಿಸ್ತಾನ ಸರ್ಕಾರ ತೆಗೆದುಕೊಳ್ಳಬೇಕು ಮತ್ತು ಈ ಕುರಿತು ಭಾರತಕ್ಕೆ ಖಚಿತಪಡಿಸಬೇಕು ಎಂದು ಗೃಹ ಸಚಿವಾಲಯದ ಅಧಿಕಾರಿಗಳು ಆಗ್ರಹಿಸಿದ್ದಾರೆ.

ಲಖ್ವಿ ಬಂಧನ ಕಾನೂನು ಬಾಹಿರ ಎಂದಿರುವ ಲಾಹೋರ್ ಹೈಕೋರ್ಟ್, ಪಾಕಿಸ್ತಾನದ ರಾವಲ್ಪಿಂಡಿ ಜೈಲಿನಲ್ಲಿರುವ ಲಖ್ವಿಯನ್ನು ಕೂಡಲೇ ಬಿಡುಗಡೆ ಮಾಡುವಂತೆಆದೇಶಿಸಿದೆ.


ಪಾಕಿಸ್ತಾನ ಸರ್ಕಾರ ಲಖ್ವಿಯ ರಹಸ್ಯ ದಾಖಲೆ ಪತ್ರಗಳು ಮತ್ತು ಆತನ ಚಟುವಟಿಕೆಯ ವಿವರ ಸಲ್ಲಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಲಾಹೋರ್ ಕೋರ್ಟ್, ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಯಿದೆಯಡಿ ಲಖ್ವಿ ಬಂಧನವನ್ನು ರದ್ದುಗೊಳಿಸಿ, ಬಿಡುಗಡೆಗೆ ಆದೇಶಿಸಿದೆ.


ಝಕಿ ಉರ್ ರೆಹಮಾನ್ ಲಖ್ವಿ ಮುಂಬೈ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ 2009ರಿಂದಲೂ ಜೈಲುವಾಸದಲ್ಲಿದದ್ದು, ಕಳೆದ ವರ್ಷ ಡಿ.18ರಂದು ಭಯೋತ್ಪಾದನಾ ನಿಗ್ರಹ ಕೋರ್ಟ್ ಲಖ್ವಿಗೆ ಜಾಮೀನು ನೀಡಿತ್ತು. ಆದರೆ ಮತ್ತೆ ಆತನನ್ನು ಬಂಧಿಸಲಾಗಿತ್ತು. ಇದನ್ನು ಪ್ರಶ್ನಿಸಿದ್ದ ಲಖ್ವಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದನು. ನಂತರ ಹೈಕೋರ್ಟ್ ಆತನ ಬಂಧನದ ಆದೇಶ ಅಮಾನತಿನಲ್ಲಿಟ್ಟು ಜಾಮೀನು ನೀಡಿತ್ತು.

ಪಾಕಿಸ್ತಾನ ಕೋರ್ಟ್ ಲಖ್ವಿಗೆ ಹಲವು ಬಾರಿ ಜಾಮೀನು ನೀಡಿದರೂ, ಭಾರತದ ಒತ್ತಡಕ್ಕೆ ಮಣಿದು ಪಾಕಿಸ್ತಾನ ಸರ್ಕಾರ ಉಗ್ರನ ಬಿಡುಗಡೆಯನ್ನು ತಡೆಯುತ್ತಾ ಬಂದಿದೆ. ಈಗ ಮತ್ತೆ ಉಗ್ರನ ಬಿಡುಗಡೆಗೆ ಕೋರ್ಟ್ ಆದೇಶಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT