ಯಾಕೂಬ್ ಅಬ್ದುಲ್ ರಜಾಕ್ ಮೆಮೊನ್‌ 
ದೇಶ

ಮುಂಬೈ ಸರಣಿ ಸ್ಫೋಟ: ಮಾಸ್ಟರ್ ಮೈಂಡ್ ಯಾಕೂಬ್ 'ಗಲ್ಲು' ಎತ್ತಿಹಿಡಿದ ಸುಪ್ರೀಂ

ಗಲ್ಲು ಶಿಕ್ಷೆಯ ತೀರ್ಪು ಪುನರ್ ಪರಿಶೀಲಿಸುವಂತೆ ಕೋರಿ 1993ರ ಮುಂಬೈ ಸರಣಿ ಬಾಂಬ್‌ ಸ್ಫೋಟ ಪ್ರಕರಣದ ಅಪರಾಧಿ ಯಾಕೂಬ್ ಅಬ್ದುಲ್...

ನವದೆಹಲಿ: ಗಲ್ಲು ಶಿಕ್ಷೆಯ ತೀರ್ಪು ಪುನರ್ ಪರಿಶೀಲಿಸುವಂತೆ ಕೋರಿ 1993ರ ಮುಂಬೈ ಸರಣಿ ಬಾಂಬ್‌ ಸ್ಫೋಟ ಪ್ರಕರಣದ ಅಪರಾಧಿ ಯಾಕೂಬ್ ಅಬ್ದುಲ್ ರಜಾಕ್ ಮೆಮೊನ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರಿಂಕೋರ್ಟ್ ವಜಾಗೊಳಿಸಿದ್ದು, ಯಾಕೂಬ್ ಗೆ ನೀಡಲಾಗಿದ್ದ ಗಲ್ಲು ಶಿಕ್ಷೆಯನ್ನು ಗುರುವಾರ ಎತ್ತಿ ಹಿಡಿದಿದೆ.

ಸರಣಿ ಬಾಂಬ್ ಸ್ಫೋಟದ ಮಾಸ್ಟರ್ ಮೈಂಡ್ ಯಾಕೂಬ್ ನ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಆರ್. ದವೆ ಅವರ ನೇತೃತ್ವದ ತ್ರಿಸದಸ್ಯ ಪೀಠ, ಅರ್ಜಿಯನ್ನು ವಜಾಗೊಳಿಸಿತು.

2014ರ ಜೂನ್‌ 2ರಂದು ಮೆಮೊನ್‌ ಮರಣ ದಂಡನೆಗೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು. ಇದಕ್ಕೂ ಮೊದಲು, 2013ರ ಮಾರ್ಚ್ 21ರಂದು ಕೆಳ ಹಂತದ ನ್ಯಾಯಾಲಯ ಮೆಮೊನ್‌ಗೆ ವಿಧಿಸಿದ್ದ ಮರಣ ದಂಡನೆಯನ್ನು ಎತ್ತಿ ಹಿಡಿದಿತ್ತು.

ಪ್ರಕರಣ ಸಂಬಂಧ 10 ಜನರಿಗೆ ಮರಣ ದಂಡನೆ ವಿಧಿಸಿ ಮಹಾರಾಷ್ಟ್ರದ ವಿಶೇಷ ಟಾಡಾ ನ್ಯಾಯಾಲಯ ತೀರ್ಪು ನೀಡಿತ್ತು. ಆದರೆ 10 ಜನರ ಗಲ್ಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್‌ ಜೀವಾವಧಿಗೆ ಪರಿವರ್ತಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT