ಝಕಿ ಉರ್ ರೆಹಮಾನ್ ಲಖ್ವಿ 
ದೇಶ

ರಾವಲ್ಪಿಂಡಿ ಜೈಲಿನಿಂದ ಉಗ್ರ ಲಖ್ವಿ ಬಿಡುಗಡೆ

ಭಾರತದ ತೀವ್ರ ವಿರೋಧದ ನಡುವೆಯೂ ಪಾಕಿಸ್ತಾನ ಸರ್ಕಾರ ಕಡೆಗೂ ಮುಂಬೈ ದಾಳಿಯ ಪ್ರಮುಖ ರೂವಾರಿ, ಲಷ್ಕರ್-ಎ-ತೋಯ್ಬಾ ಉಗ್ರ ಸಂಘಟನೆಯ...

ಇಸ್ಲಾಮಾಬಾದ್: ಭಾರತದ ತೀವ್ರ ವಿರೋಧದ ನಡುವೆಯೂ ಪಾಕಿಸ್ತಾನ ಸರ್ಕಾರ ಕಡೆಗೂ ಮುಂಬೈ ದಾಳಿಯ ಪ್ರಮುಖ ರೂವಾರಿ, ಲಷ್ಕರ್-ಎ-ತೋಯ್ಬಾ ಉಗ್ರ ಸಂಘಟನೆಯ ಮುಖ್ಯಸ್ಥ ಝಕಿ ಉರ್ ರೆಹಮಾನ್ ಲಖ್ವಿಯನ್ನು ಜೈಲಿನಿಂದ ಬಿಡುಗಡೆ ಮಾಡಿದೆ.

ಲಖ್ವಿಯನ್ನು ತಕ್ಷಣವೇ ಜೈಲಿನಿಂದ ಬಿಡುಗಡೆ ಮಾಡಬೇಕು ಎಂದು ನಿನ್ನೆ ಲಾಹೋರ್ ಕೋರ್ಟ್ ಆದೇಶಿಸಿದ ಹಿನ್ನೆಲೆಯಲ್ಲಿ ಇಂದು ರಾವಲ್ಪಿಂಡಿ ಜೈಲಿನಿಂದ ರಹಸ್ಯವಾಗಿ ಉಗ್ರನನ್ನು ಬಿಡುಗಡೆ ಮಾಡಲಾಗಿದೆ.

ಲಾಹೋರ್ ಕೋರ್ಟ್ ಲಖ್ವಿ ಬಿಡುಗಡೆಗೆ ಆದೇಶಿಸಿದ ಕೆಲವೇ ಗಂಟೆಗಳಲ್ಲಿ ಪ್ರತಿಕ್ರಿಯಿಸಿದ್ದ ಭಾರತ,
ಮುಂಬೈ ದಾಳಿಯ ರೂವಾರಿ ಜೈಲಿನಿಂದ ಹೊರ ಬರದಂತೆ ನೋಡಿಕೊಳ್ಳಲು ಬೇಕಾದ ಎಲ್ಲಾ ರೀತಿಯ ಕಾನೂನು ಕ್ರಮಗಳನ್ನು ಪಾಕಿಸ್ತಾನ ಸರ್ಕಾರ ತೆಗೆದುಕೊಳ್ಳಬೇಕು ಮತ್ತು ಈ ಕುರಿತು ಭಾರತಕ್ಕೆ ಖಚಿತಪಡಿಸಬೇಕು ಎಂದು ಒತ್ತಾಯಿಸಿತ್ತು.

ಪಾಕಿಸ್ತಾನ ಸರ್ಕಾರ ಲಖ್ವಿಯ ರಹಸ್ಯ ದಾಖಲೆ ಪತ್ರಗಳು ಮತ್ತು ಆತನ ಚಟುವಟಿಕೆಯ ವಿವರ ಸಲ್ಲಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಲಾಹೋರ್ ಕೋರ್ಟ್, ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಯಿದೆಯಡಿ ಲಖ್ವಿ ಬಂಧನವನ್ನು ರದ್ದುಗೊಳಿಸಿ, ಬಿಡುಗಡೆಗೆ ಆದೇಶಿಸಿ
ತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

SCROLL FOR NEXT