ಅರವಿಂದ್ ಕೇಜ್ರಿವಾಲ್ (ಸಂಗ್ರಹ ಚಿತ್ರ) 
ದೇಶ

ಮೋದಿ ಆಡಳಿತ ಮಾದರಿಗಿಂತ ನನ್ನ ಆಡಳಿತ ಮಾದರಿ ಉತ್ತಮ: ಕೆಜ್ರಿವಾಲ್

ನನ್ನ ಜನಕೇಂದ್ರಿತವಾದ ಆಡಳಿತ ಮಾದರಿ ಪ್ರಧಾನಿ ನರೇಂದ್ರಮೋದಿ ಅವರ ಆಡಳಿತಕ್ಕಿಂತಲೂ ಉತ್ತಮವಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ನವದೆಹಲಿ: ನನ್ನ ಜನಕೇಂದ್ರಿತವಾದ ಆಡಳಿತ ಮಾದರಿ ಪ್ರಧಾನಿ ನರೇಂದ್ರಮೋದಿ ಅವರ ಆಡಳಿತಕ್ಕಿಂತಲೂ ಉತ್ತಮವಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಕೇಜ್ರಿವಾಲ್ ಅವರು, ಕೆಲವೇ ಕೆಲವು ಜನರ ಕೇಂದ್ರಿತವಾದ ಸರ್ಕಾರಕ್ಕಿಂತಲೂ ಸಮಗ್ರ ಜನಕೇಂದ್ರಿತವಾದ ನನ್ನ ಸರ್ಕಾರ ಮೋದಿ ಸರ್ಕಾರಕ್ಕಿಂತಲೂ ಆದರ್ಶವಾಗಿದೆ. ಹಲವು ಏಳು-ಬೀಳುಗಳ ನಡುವೆಯೇ ನಾವು ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸುವತ್ತ ಮುನ್ನಡೆಯುತ್ತಿದ್ದೇವೆ. ಆಮ್ ಆದ್ಮಿ ಪಕ್ಷದಲ್ಲಿ ಉಂಟಾದ ಕೆಲವು ಗೊಂದಲಗಳಿಂದ ಸರ್ಕಾರದ ಕಾರ್ಯಕ್ರಮಗಳು ಜನರಿಗೆ ತಲುಪಿದ್ದರೂ ಮಾಧ್ಯಮಗಳು ಅದನ್ನು ಗುರುತಿಸುವಲ್ಲಿ ವಿಫಲವಾಗಿವೆ. 50 ದಿನಗಳ ಆಡಳಿತ ವ್ಯವಸ್ಥೆಯನ್ನು ಸರಿದಾರಿಗೆ ತಂದಿರುವ ಹೆಮ್ಮೆ ನಮಗಿದೆ ಎಂದು ಹೇಳಿದ್ದಾರೆ.

ಮೋದಿ ಸರ್ಕಾರ ಉತ್ತಮ ಆಡಳಿತ ನೀಡಿದೆ ಎಂದು ಜನರು ಹೇಳುತ್ತಿದ್ದಾರೆ ಎಂದು ಆಪಕ್ಷದ ನಾಯಕರು ಹೇಳುತ್ತಿದ್ದಾರೆ. ಆದರೆ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಜನತೆ 67 ಸೀಟುಗಳನ್ನು ನೀಡಿದ ಜನ, ಬಿಜೆಪಿಗೆ ಕೊಟ್ಟಿದ್ದು ಕೇವಲ 3 ಸ್ಥಾನ ಮಾತ್ರ. ಹಾಗಾದರೆ ಯಾವ ಸರ್ಕಾರ ಉತ್ತಮವಾಗಿದೆ..? ಎಂದು ಕೇಜ್ರಿವಾಲ್ ಪ್ರಶ್ನಿಸಿದರು. ನಾನು ಜನರ ಮಧ್ಯೆ ಇದ್ದು, ಜನಕೇಂದ್ರಿತ ಅಧಿಕಾರ ನಡೆಸುತ್ತಿದ್ದೇನೆ. ಆದರೆ, ಮೋದಿ ದೇಶದ ಕೆಲವೇ ಕೆಲವು ಶ್ರೀಮಂತ ಜನರ ಮಧ್ಯೆ ಆಡಳಿತ ನಡೆಸುತ್ತಿದ್ದಾರೆ ಎಂದು ಕೇಜ್ರಿವಾಲ್ ವ್ಯಂಗ್ಯವಾಡಿದರು.

ಜನಸಾಮಾನ್ಯರಿಗೆ ಸರ್ಕಾರದ ಯೋಜನೆಗಳನ್ನು ಸರಿಯಾಗಿ ತಲುಪಿಸುವುದು ನಮ್ಮ ಕರ್ತವ್ಯ. ಕಾರ್ಪೊರೇಟರ್‌ಗಳಿಗೆ ರತ್ನಗಂಬಳಿ ಹಾಕಿ ಅವಕಾಶ ನೀಡುವುದು ಬಿಜೆಪಿ ಕೆಲಸ. ಚುನಾವಣೆಯಲ್ಲಿ ನೀಡಿರುವ ಎಲ್ಲ ಭರವಸೆಗಳನ್ನೂ ಕಾಲಮಿತಿಯೊಳಗೆ ಈಡೇರಿಸುವ ಆಶ್ವಾಸನೆ ಕೊಟ್ಟಿದ್ದಾರೆ. ಅಧಿಕಾರಿಗಳನ್ನು ಸರಿದಾರಿಗೆ ತರುವುದು ಅಷ್ಟು ಸುಲಭವಲ್ಲ ಎಂದು ನನಗೆ ಮನವರಿಕೆಯಾಗಿದೆ. ಆದರೂ ದೆಹಲಿಯಲ್ಲಿ ತೆರಿಗೆ ಸಂಗ್ರಹಕ್ಕೆ ನಾವು ಹೆಚ್ಚು ಒತ್ತು ನೀಡಿದ್ದರಿಂದ ನಿರೀಕ್ಷಿತ ಗುರಿ ತಲುಪುತ್ತಿದ್ದೇವೆ. ಮುಂದಿನ ಐದು ವರ್ಷದೊಳಗೆ ನಾವು ಜನಮೆಚ್ಚುವಂತಹ ಆಡಳಿತ ನೀಡುತ್ತೇವೆಂದು ಆಶ್ವಾಸನೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT