ವಿ.ಕೆ.ಸಿಂಗ್‌ 
ದೇಶ

ನನ್ನ ವಿರುದ್ಧ ಮಾಧ್ಯಮಗಳ ವಾಗ್ಧಾಳಿಗೆ ಶಸ್ತ್ರಾಸ್ತ್ರ ಲಾಬಿ ಕಾರಣ: ವಿ.ಕೆ.ಸಿಂಗ್‌

ನನ್ನ ವಿರುದ್ಧ ಮಾಧ್ಯಮಗಳು ವಾಗ್ದಾಳಿ ನಡೆಸಲು ಮೂಲ ಕಾರಣ ಶಸ್ತ್ರಾಸ್ತ್ರ ಲಾಬಿ ಎಂದು ಕೇಂದ್ರ ಸಚಿವ ವಿ.ಕೆ.ಸಿಂಗ್‌ ಭಾನುವಾರ ಆರೋಪಿಸಿದ್ದಾರೆ...

ನವದೆಹಲಿ: ನನ್ನ ವಿರುದ್ಧ ಮಾಧ್ಯಮಗಳು ವಾಗ್ದಾಳಿ ನಡೆಸಲು ಮೂಲ ಕಾರಣ ಶಸ್ತ್ರಾಸ್ತ್ರ ಲಾಬಿ ಎಂದು ಕೇಂದ್ರ ಸಚಿವ ವಿ.ಕೆ.ಸಿಂಗ್‌ ಭಾನುವಾರ ಆರೋಪಿಸಿದ್ದಾರೆ.

ಸೇನಾ ಮುಖ್ಯಸ್ಥನಾಗಿದ್ದ ಸಂದರ್ಭದಲ್ಲಿ ನನ್ನನ್ನು ಮಣಿಸಲು ಶಸ್ತ್ರಾಸ್ತ್ರ ಲಾಬಿಗಳಿಗೆ ಸಾಧ್ಯವಾಗಲಿಲ್ಲ. ಹಾಗಾಗಿ, ಈಗ ಅರು ತಮ್ಮ ವಿರುದ್ಧ ಕತ್ತಿ ಮಸಿಯುವ ಪ್ರಯತ್ನ ಮುಂದುವರೆಸಿದ್ದಾರೆ. ನನ್ನ ವಿರುದ್ಧ ನಡೆಸಲಾಗುತ್ತಿರುವ ಸಂಚಿನ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ಮಾಹಿತಿ ನೀಡಿದ್ದೇನೆ ಎಂದು ಸಿಂಗ್ ತಿಳಿಸಿದ್ದಾರೆ.

ನನ್ನ ವಿರುದ್ಧ ಸಂಚು ನಡೆಸುತ್ತಿರುವವರಲ್ಲಿ ಮಾಜಿ ಸೇನಾಧಿಕಾರಿ ಭಾಗಿಯಾಗಿದ್ದಾರೆ. ಹಲವು ಸಂಸ್ಥೆಗಳೊಂದಿಗೆ ಅವರು ಹೊಂದಿರುವ ಸಂಬಂಧದ ಬಗ್ಗೆ ಹೇಳಲು ಇಚ್ಚಿಸುವುದಿಲ್ಲ. ಆದರೆ, ಅವರು ಸಾಕಷ್ಟು ಮಂದಿಯಿಂದ ಅವರು ಹಣ ಪಡೆದಿದ್ದಾರೆ. ಕೆಲವು ಪತ್ರಕರ್ತರು ಹಾಗೂ ಇತರರು ಅವರು ಹೇಳಿದ್ದನ್ನು ಬರೆದಿದ್ದಾರೆ ಎಂದು ಅವರು ಹೇಳಿದ್ದಾರೆ.

ಇಂದಿಗೂ ಶಸ್ತ್ರಾಸ್ತ್ರ ಲಾಬಿ ನಿಮ್ಮ ವಿರುದ್ಧ ಪಿತೂರಿ ನಡೆಸಿವೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈಗಲೂ ಶಸ್ತ್ರಾಸ್ತ್ರ ಲಾಬಿ ನನ್ನ ವಿರುದ್ಧ ಸಂಚು ರೂಪಿಸುತ್ತಿವೆ. ಚುನಾವಣೆ ಸಮಯದಲ್ಲೂ ಸಾಕಷ್ಟು ಸಂಚು ನಡೆಸಿದ್ದರು. ಈಗಲೂ ನನ್ನನ್ನು ಸ್ಥಾನದಿಂದ ಕೆಳಗಿಳಿಸುವುದೊಂದೇ ಅವರ ಗುರಿಯಾಗಿದೆ ಎಂದು ದೂರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT