ಸಂಗ್ರಹ ಚಿತ್ರ 
ದೇಶ

ಕೋತಿ ಅಥವಾ ನಾಯಿ ಕಚ್ಚಿದರೆ 2 ಲಕ್ಷ ಪರಿಹಾರ

ಕೋತಿ ಅಥವಾ ನಾಯಿ ದಾಳಿಗೆ ಒಳಗಾದವರಿಗೆ ಸರ್ಕಾರ 2 ಲಕ್ಷ ರುಪಾಯಿ ಪರಿಹಾರ ನೀಡಬೇಕೆಂದು ಉತ್ತರಾಖಂಡ್ ಹೈಕೋರ್ಟ್...

ನೈನಿತಾಲ್: ಕೋತಿ ಅಥವಾ ನಾಯಿ ದಾಳಿಗೆ ಒಳಗಾದವರಿಗೆ ಸರ್ಕಾರ 2 ಲಕ್ಷ ರುಪಾಯಿ ಪರಿಹಾರ ನೀಡಬೇಕೆಂದು ಉತ್ತರಾಖಂಡ್ ಹೈಕೋರ್ಟ್ ಮಹತ್ವದ ತೀರ್ಪು ಹೊರಡಿಸಿದೆ.

ನಾಯಿ ಅಥವಾ ಕೋತಿ ದಾಳಿಗೆ ಒಳಗಾದ ವಾರದೊಳಗೆ ಜಿಲ್ಲಾ ಜಿಲ್ಲಾ ಮುನ್ಸಿಪಲ್ ಕಾರ್ಪೋರೇಶನ್ ಮತ್ತು ಸರ್ಕಾರ ಸೇರಿ ಪೀಡಿತರಿಗೆ ಪರಿಹಾರವನ್ನು ಒದಗಿಸಬೇಕು ಎಂದು ನ್ಯಾಯಮೂರ್ತಿ ಅಲೋಕ್ ಸಿಂಗ್​ ಮತ್ತು ಸರ್ವೇಶ್ ಕುಮಾರ್ ಗುಪ್ತಾ ಅವರನ್ನೊಳಗೊಂಡ ನ್ಯಾಯಪೀಠ ಆದೇಶ ನೀಡಿದೆ.

ನೈನಿತಾಲ್‌ನಲ್ಲ ಬೀದಿನಾಯಿಗಳ ಹಾವಳಿ ಬಹುದೊಡ್ಡ ಸಮಸ್ಯೆಯಾಗಿ ಕಾಡುತ್ತಿದ್ದು ಜನವರಿ ತಿಂಗಳೊಂದರಲ್ಲೇ 4000 ಮಂದಿಗೆ ನಾಯಿ ಕಡಿದ ವರದಿಯಾಗಿತ್ತು.

ಈ ಹಿನ್ನಲೆಯಲ್ಲಿ ನಾಯಿ ಮತ್ತು ಕೋತಿ ದಾಳಿಗೆ ತುತ್ತಾದ ಜನ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ನೀಡಿದೆ. ಅಲ್ಲದೇ, ಬೀಡಾದಿ ದನಗಳ ದಾಳಿಗೊಳಗಾದವರಿಗೂ 1 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕೋರ್ಟ್ ಆದೇಶಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT