ಶಿವ ಸೇನಾ ನಾಯಕ ಎಂಪಿ ಸಂಜಯ್ ರಾಟ್ 
ದೇಶ

ಮುಸ್ಲಿಮರ ಮತದಾನ ಹಕ್ಕು ಹಿಂಪಡೆಯಿರಿ: ಶಿವಸೇನೆ

ವೊಟ್ ಬ್ಯಾಂಕ್ ರಾಜಕಾರಣಕ್ಕೆ ಮುಸ್ಲಿಮರ ಮತ ಹೆಚ್ಚಾಗಿ ಬಳಕೆಯಾಗುತ್ತಿದ್ದು, ಮುಸ್ಲಿಮರ ಮತದಾನ ಹಕ್ಕನ್ನು ರದ್ದುಗೊಳಿಸಿ ಎಂದು ಶಿವಸೇನೆ...

ಮುಂಬಯಿ: ವೊಟ್ ಬ್ಯಾಂಕ್ ರಾಜಕಾರಣಕ್ಕೆ ಮುಸ್ಲಿಮರ ಮತ ಹೆಚ್ಚಾಗಿ ಬಳಕೆಯಾಗುತ್ತಿದ್ದು, ಮುಸ್ಲಿಮರ ಮತದಾನ ಹಕ್ಕನ್ನು ರದ್ದುಗೊಳಿಸಿ ಎಂದು ಶಿವಸೇನೆ ವಿವಾದಾತ್ಮಕ ಹೇಳಿಕೆ ನೀಡಿದೆ.

ಮುಸ್ಲಿಮರಿಗೆ ಆಗಿರುವ ಅನ್ಯಾಯದ ವಿರುದ್ಧ ಹೋರಾಟ ನಡೆಸುವ ನೆಪದಲ್ಲಿ ವೋಟ್ ಬ್ಯಾಂಕ್‌ ರಾಜಕಾರಣ ಮಾಡಲಾಗುತ್ತಿದೆ. ಮುಸ್ಲೀಮರ ಶೈಕ್ಷಣಿಕ ಹಾಗೂ ಆರೋಗ್ಯ ಸ್ಥಿತಿಗತಿಯನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ.

ಈ ಹಿಂದೆ ಕಾಂಗ್ರೆಸ್‌ ಇದನ್ನೇ ದಾಳವಾಗಿ ಬಳಸಿಕೊಂಡಿದೆ. ಈಗ ಜಾತ್ಯತೀತರೆಂದು ಹೇಳಿಕೊಳ್ಳುವ ಎಲ್ಲರೂ ಇದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಶಿವಸೇನೆಯ ಶಿವ ಸೇನಾ ನಾಯಕ ಎಂಪಿ ಸಂಜಯ್ ರಾಟ್ ಹೇಳಿದ್ದಾರೆ

ಪಕ್ಷದ ಮುಖವಾಣಿ ಸಮ್ನಾದ ಸಂಪಾದಕೀಯದಲ್ಲಿ ಬರೆದಿರುವ ಸಂಜಯ್ ರಾಟ್, ವೋಟ್ ಬ್ಯಾಂಕ್‌ ರಾಜಕಾರಣಕ್ಕೆ ಹೆಚ್ಚಾಗಿ ಬಳಕೆಯಾಗುವ ಕಾರಣ ಮುಸ್ಲಿಮರ ಮತದಾನದ ಹಕ್ಕನ್ನು ರದ್ದು ಪಡಿಸಬೇಕು. ಮಜ್ಲಿಸ್ ಇ ಇತ್ತೆಹಾದುಲ್ ಮುಸ್ಲಿಮೀನ್ ಹಾಗೂ ಓವೈಸಿ ಸೋದರರು ಅಲ್ಪಸಂಖ್ಯಾತ ಸಮುದಾಯವನ್ನು ಹಾಳು ಮಾಡಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

ಕೇವಲ ರಾಜಕಾರಣಕ್ಕೆ ಮುಸ್ಲಿಮರನ್ನು ಬಳಸಿಕೊಳ್ಳಲಾಗುತ್ತಿದೆ. ಇದರಿಂದ ಅವರ ಅಭಿವೃದ್ಧಿ ಎಂದಿಗೂ ಸಾಧ್ಯವಿಲ್ಲ. ವೋಟ್ ಬ್ಯಾಂಕ್ ರಾಜಕಾರಣದಿಂದ ಅವರಿಗೆ ಭವಿಷ್ಯವೇ ಇಲ್ಲದಂತಾಗುವುದು. ಅದಕ್ಕೆ ಮುಸ್ಲಿಮರ ಮತದಾನದ ಹಕ್ಕನ್ನು ರದ್ದುಗೊಳಿಸಬೇಕು ಎಂದು ಹಿಂದೆ ಬಾಳಾ ಸಾಹೇಬ್‌ ಹೇಳಿದ್ದರು. ಅವರು ಹೇಳಿದ್ದು ಸರಿಯೇ ಇದೆ ಎಂದು ಪಕ್ಷದ ಮುಖವಾಣಿ ಸಮ್ನಾದ ಸಂಪಾದಕೀಯದಲ್ಲಿ ಬರೆಯಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT