ಸುಬ್ರಹ್ಮಣ್ಯನ್ ಸ್ವಾಮಿ (ಸಂಗ್ರಹ ಚಿತ್ರ) 
ದೇಶ

ಮೇಕೆದಾಟು ಯೋಜನೆಗೆ ವಿರೋಧ ಸಲ್ಲ: ಡಾ.ಸ್ವಾಮಿ

ತಮಿಳುನಾಡು ಸರ್ಕಾರವು ಮೇಕೆದಾಟು ಯೋಜನೆ ಬಗ್ಗೆ ಅನಗತ್ಯ ಹುಯಿಲೆಬ್ಬಿಸುತ್ತಿದೆ ಎಂದು ಬಿಜೆಪಿ ಮುಖಂಡ ಡಾ. ಸುಬ್ರಹ್ಮಣ್ಯನ್ ಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು...

ರಾಯಚೂರು: ತಮಿಳುನಾಡು ಸರ್ಕಾರವು ಮೇಕೆದಾಟು ಯೋಜನೆ ಬಗ್ಗೆ ಅನಗತ್ಯ ಹುಯಿಲೆಬ್ಬಿಸುತ್ತಿದೆ ಎಂದು ಬಿಜೆಪಿ ಮುಖಂಡ ಡಾ. ಸುಬ್ರಹ್ಮಣ್ಯನ್ ಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.

ನಗರ ಹೊರವಲಯದ ಯಮಮರಸ್ ನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆಯನ್ನು ರಾಜಕೀಯ ಲಾಭಕ್ಕಾಗಿ ಎಐಡಿಎಂಕೆ ಸೇರಿದಂತೆ ಹಲವು ಪಕ್ಷಗಳು ಬಳಸಿಕೊಳ್ಳುತ್ತಿವೆ. ತಮಿಳುನಾಡು ಸರ್ಕಾರವು ಇಸ್ರೇಲ್ ಮಾದರಿಯಲ್ಲಿ ಸಮುದ್ರದ ನೀರನ್ನು ಕುಡಿಯಲು ಯೋಗ್ಯ ಮಾಡುವ ತಂತ್ರಜ್ಞಾನ ಅಳವಡಿಸಿಕೊಂಡಲ್ಲಿ ಸಮಸ್ಯೆಗೆ ಪರಿಹಾರ ತಾನಾಗಿಯೇ ದೊರೆಯಲಿದೆ.

ಅದರ ಬದಲಿಗೆ ನೆರೆಯ ರಾಜ್ಯಗಳೊಂದಿಗೆ ತಂಟೆ ತೆಗೆಯುವುದು ಸಲ್ಲದು ಎಂದರು. ಬ್ರಿಟಿಷರ ಕಾಲದಲ್ಲಿಯೇ ಕರ್ನಾಟಕಕ್ಕೆ ನೀರಾವರಿ ಯೋಜನೆಗಳ ಜಾರಿಗೆ ಸಂಬಂಧಿಸಿ ಅನ್ಯಾಯ ಮಾಡಲಾಗಿತ್ತು. ಆಗಿನ ಕಾಲಘಟ್ಟದಲ್ಲಿ ತಮಿಳುನಾಡಿನಲ್ಲಿಯೇ ಬ್ರಿಟಿಷರ ಆಡಳಿತ ಕೇಂದ್ರ ಇದ್ದ ಕಾರಣ ಹತ್ತಾರು ರೀತಿಯ ನೀರಾವರಿ ಸವಲತ್ತು ಪಡೆದುಕೊಳ್ಳಲಾಗಿದೆ. ಹಾಗಾಗಿ ಸದ್ಯ ಕರ್ನಾಟಕದೊಂದಿಗೆ ತಮಿಳುನಾಡು ಮೇಕೆದಾಟು ವಿಚಾರಕ್ಕೆ ತೊಡಕುಂಟು ಮಾಡುವುದು ಸೂಕ್ತವಲ್ಲ ಎಂದು ಹೇಳಿದರು.

ಜಯಲಲಿತಾ ಕೇಸ್
ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿ ತಮಿಳುನಾಡು ಮಾಜಿ ಸಿಎಂ ಜೆ. ಜಯಲಲಿತಾ ಮತ್ತು ಗೆಳತಿ ಶಶಿಕಲಾ ಶೀಘ್ರದಲ್ಲಿಯೇ ಮತ್ತೆ ಜೈಲು ಸೇರಲಿದ್ದಾರೆ. ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದು ಶೀಘ್ರ ತೀರ್ಪು ಹೊರಬೀಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT