ಹೆರಿಟೇಜ್ ಫ್ರೆಶ್ 
ದೇಶ

ತಮಿಳುನಾಡು: ಆಂಧ್ರ ಸಿಎಂ ನಾಯ್ಡು ಒಡೆತನದ ಹೆರಿಟೇಜ್ ಫ್ರೆಶ್ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ತಮಿಳುನಾಡು ಮೂಲದ 20 ಮರಗಳ್ಳರ ಎನ್‌ಕೌಂಟರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಾದ್ಯಂತ ತೀವ್ರ ಪ್ರತಿಭಟನೆಗಳು ನಡೆಯುತ್ತಿದ್ದು...

ಚೆನ್ನೈ: ತಮಿಳುನಾಡು ಮೂಲದ 20 ಮರಗಳ್ಳರ ಎನ್‌ಕೌಂಟರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಾದ್ಯಂತ ತೀವ್ರ ಪ್ರತಿಭಟನೆಗಳು ನಡೆಯುತ್ತಿದ್ದು, ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಒಡೆತನದ ಹೆರಿಟೇಜ್ ಫ್ರೆಶ್ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದು ಪರಾರಿಯಾಗಿದ್ದಾರೆ.

ಚೆನ್ನೈನ ಐನಾವರಂನಲ್ಲಿರುವ ನಾಯ್ಡು ಅವರ ಹೆರಿಟೇಜ್ ಫ್ರೆಶ್ ಮೇಲೆ ಇಂದು ಬೆಳಗ್ಗೆ ಐವರು ಕಿಡಿಗೇಡಿಗಳು ಪೆಟ್ರೋಲ್ ಬಾಂಬ್ ಎಸೆದು ಪರಾರಿಯಾಗಿದ್ದಾರೆ. ಈ ದಾಳಿ ವೇಳೆ ಮಳಿಗೆ ಮುಚ್ಚಿದ್ದರಿಂದ ಹೆಚ್ಚು ಹಾನಿ ಸಂಭವಿಸಿಲ್ಲ. ಅಂಗಡಿ ಮುಂಗಟ್ಟು ಹಾಗೂ ಎರಡು ಕಿಟಕಿ ಗಾಜುಗಳು ಒಡೆದಿದೆ. ಸದ್ಯ ದಾಳಿಯನ್ನು ತಾವೇ ಮಾಡಿರುವುದಾಗಿ ನಾನ್ ತಮಿಳರ್ ಪಕ್ಷದ ಸದಸ್ಯರು ಒಪ್ಪಿಕೊಂಡಿದ್ದು, ಸದ್ಯ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಆಂಧ್ರದ ಚಿತ್ತೂರು ಜಿಲ್ಲೆಯ ತಿರುಪತಿ ಸಮೀಪದ ಶೇಷಾಚಲಂ ಅರಣ್ಯದಲ್ಲಿ ತಮಿಳುನಾಡು ಮೂಲದ 20 ಮಂದಿ ಮರಗಳ್ಳರನ್ನು ಪೊಲೀಸರು ಎನ್‌ಕೌಂಟರ್ ಮಾಡಿದ್ದರು. ಇದರಿಂದಾಗಿ ತಮಿಳುನಾಡಿನಾದ್ಯಂತ ತೀವ್ರ ಪ್ರತಿಭಟನೆಗಳು ನಡೆಯುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT