ನೇತಾಜಿ ಸಭಾಷ್‌ಚಂದ್ರ ಬೋಸ್ 
ದೇಶ

ಮೋದಿ ಸರ್ಕಾರದಿಂದ ನೇತಾಜಿ ರಹಸ್ಯ ಕಡತಗಳ ಬಹಿರಂಗ, ಸಮಿತಿ ರಚನೆ

ನೇತಾಜಿ ಸಭಾಷ್‌ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ ರಹಸ್ಯ ಕಡತಗಳ ಬಹಿರಂಗಕ್ಕೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮುಂದಾಗಿದ್ದು, ಈ ಸಂಬಂಧ ಉನ್ನತ...

ನವದೆಹಲಿ: ನೇತಾಜಿ ಸಭಾಷ್‌ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ ರಹಸ್ಯ ಕಡತಗಳ ಬಹಿರಂಗಕ್ಕೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮುಂದಾಗಿದ್ದು, ಈ ಸಂಬಂಧ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ ಎಂದು ಬುಧವಾರ ವರದಿಗಳು ತಿಳಿಸಿವೆ.

ಪ್ರಧಾನಿ ಮೋದಿ ಅವರು ಬರ್ಲಿನ್‌ನಲ್ಲಿ ಬೋಸ್ ಸಂಬಂಧ ಸೂರ್ಯ ಕುಮಾರ್ ಬೋಸ್ ಅವರಿಗೆ ರಹಸ್ಯ ಕಡತಗಳನ್ನು ಬಹಿರಂಗಪಡಿಸುವ ಕುರಿತು ಪರಿಶೀಲಿಸುವುದಾಗಿ ಭರವಸೆ ನೀಡಿದ ಮಾರನೇ ದಿನವೇ ಕೇಂದ್ರ ಸರ್ಕಾರ ಈ ಸಂಬಂಧ ಸಂಪುಟ ಕಾರ್ಯದರ್ಶಿ ನೇತೃತ್ವದ ಆಂತರಿಕ ಸಚಿವರ ಸಮಿತಿ ರಚಿಸಿದೆ.

ವರದಿಗಳ ಪ್ರಕಾರ, ಸಂಶೋಧನೆ ಮತ್ತು ವಿಶ್ಲೇಷಣೆ ವಿಭಾಗ, ಗುಪ್ತಚರ ಇಲಾಖೆ ಮತ್ತು ಪ್ರಧಾನಿ ಕಾರ್ಯಾಲಯದ ಅಧಿಕಾರಿಗಳು ಸಹ ಈ ಸಮಿತಿಯಲ್ಲಿರಲಿದ್ದಾರೆ.

ಸುಭಾಷ್‌ಚಂದ್ರ ಬೋಸ್ ಅವರ ಸಾವಿನ ಕುರಿತ ಎಲ್ಲಾ ರಹಸ್ಯ ಕಡತಗಳನ್ನು ಸಮಿತಿ ಅಧ್ಯಯನ ಮಾಡಲಿದೆ. ಬಳಿಕ ಆ ದಾಖಲೆಗಳನ್ನು ಬಹಿರಂಗಪಡಿಸುವ ಕುರಿತು ನಿರ್ಧಾರ ತೆಗೆದುಕೊಳ್ಳಲಿದೆ ಎನ್ನಲಾಗಿದೆ.

ಈ ಮಧ್ಯೆ, ವಿದೇಶಗಳೊಂದಿಗಿನ ಸಂಬಂಧಗಳ ಮೇಲೆ ಪರಿಣಾಮ ಬೀರುವಂತಹ ಕಡತಗಳನ್ನು ಬಹಿರಂಗಪಡಿಸದಂತೆ ಸಮಿತಿ ಸರ್ಕಾರಕ್ಕೆ ಸಲಹೆ ನೀಡಲಿದೆ.

ಬೋಸ್ ಕುಟುಂಬದ ವಿರುದ್ಧ ನೆಹರೂ ಸರ್ಕಾರ ಎರಡು ದಶಕಗಳ ಕಾಲ ನಡೆಸಿದ ಬೇಹುಗಾರಿಕೆ ವಿಚಾರ ಸೋರಿಕೆಯಾಗುತ್ತಿದ್ದಂತೆ ನೇತಾಜಿ ಸಾವಿನ ಕುರಿತ ರಹಸ್ಯ ದಾಖಲೆಗಳನ್ನು ಬಹಿರಂಗ ಮಾಡಬೇಕು ಎನ್ನುವ ಬೇಡಿಕೆ ಹೆಚ್ಚಾಗಿತ್ತು. ನಿನ್ನೆ ನೇತಾಜಿ ಕುರಿತ ರಹಸ್ಯ ದಾಖಲೆಗಳನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿ ಕೋಲ್ಕತಾದಲ್ಲಿ ಬೋಸ್ ಕುಟುಂಬದ ಸದಸ್ಯರು ಹಾಗೂ ಬೆಂಬಲಿಗರು ರ್ಯಾಲಿ ಸಹ ನಡೆಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT