ನೇತಾಜಿ ಸಭಾಷ್‌ಚಂದ್ರ ಬೋಸ್ 
ದೇಶ

ಮೋದಿ ಸರ್ಕಾರದಿಂದ ನೇತಾಜಿ ರಹಸ್ಯ ಕಡತಗಳ ಬಹಿರಂಗ, ಸಮಿತಿ ರಚನೆ

ನೇತಾಜಿ ಸಭಾಷ್‌ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ ರಹಸ್ಯ ಕಡತಗಳ ಬಹಿರಂಗಕ್ಕೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮುಂದಾಗಿದ್ದು, ಈ ಸಂಬಂಧ ಉನ್ನತ...

ನವದೆಹಲಿ: ನೇತಾಜಿ ಸಭಾಷ್‌ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ ರಹಸ್ಯ ಕಡತಗಳ ಬಹಿರಂಗಕ್ಕೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮುಂದಾಗಿದ್ದು, ಈ ಸಂಬಂಧ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ ಎಂದು ಬುಧವಾರ ವರದಿಗಳು ತಿಳಿಸಿವೆ.

ಪ್ರಧಾನಿ ಮೋದಿ ಅವರು ಬರ್ಲಿನ್‌ನಲ್ಲಿ ಬೋಸ್ ಸಂಬಂಧ ಸೂರ್ಯ ಕುಮಾರ್ ಬೋಸ್ ಅವರಿಗೆ ರಹಸ್ಯ ಕಡತಗಳನ್ನು ಬಹಿರಂಗಪಡಿಸುವ ಕುರಿತು ಪರಿಶೀಲಿಸುವುದಾಗಿ ಭರವಸೆ ನೀಡಿದ ಮಾರನೇ ದಿನವೇ ಕೇಂದ್ರ ಸರ್ಕಾರ ಈ ಸಂಬಂಧ ಸಂಪುಟ ಕಾರ್ಯದರ್ಶಿ ನೇತೃತ್ವದ ಆಂತರಿಕ ಸಚಿವರ ಸಮಿತಿ ರಚಿಸಿದೆ.

ವರದಿಗಳ ಪ್ರಕಾರ, ಸಂಶೋಧನೆ ಮತ್ತು ವಿಶ್ಲೇಷಣೆ ವಿಭಾಗ, ಗುಪ್ತಚರ ಇಲಾಖೆ ಮತ್ತು ಪ್ರಧಾನಿ ಕಾರ್ಯಾಲಯದ ಅಧಿಕಾರಿಗಳು ಸಹ ಈ ಸಮಿತಿಯಲ್ಲಿರಲಿದ್ದಾರೆ.

ಸುಭಾಷ್‌ಚಂದ್ರ ಬೋಸ್ ಅವರ ಸಾವಿನ ಕುರಿತ ಎಲ್ಲಾ ರಹಸ್ಯ ಕಡತಗಳನ್ನು ಸಮಿತಿ ಅಧ್ಯಯನ ಮಾಡಲಿದೆ. ಬಳಿಕ ಆ ದಾಖಲೆಗಳನ್ನು ಬಹಿರಂಗಪಡಿಸುವ ಕುರಿತು ನಿರ್ಧಾರ ತೆಗೆದುಕೊಳ್ಳಲಿದೆ ಎನ್ನಲಾಗಿದೆ.

ಈ ಮಧ್ಯೆ, ವಿದೇಶಗಳೊಂದಿಗಿನ ಸಂಬಂಧಗಳ ಮೇಲೆ ಪರಿಣಾಮ ಬೀರುವಂತಹ ಕಡತಗಳನ್ನು ಬಹಿರಂಗಪಡಿಸದಂತೆ ಸಮಿತಿ ಸರ್ಕಾರಕ್ಕೆ ಸಲಹೆ ನೀಡಲಿದೆ.

ಬೋಸ್ ಕುಟುಂಬದ ವಿರುದ್ಧ ನೆಹರೂ ಸರ್ಕಾರ ಎರಡು ದಶಕಗಳ ಕಾಲ ನಡೆಸಿದ ಬೇಹುಗಾರಿಕೆ ವಿಚಾರ ಸೋರಿಕೆಯಾಗುತ್ತಿದ್ದಂತೆ ನೇತಾಜಿ ಸಾವಿನ ಕುರಿತ ರಹಸ್ಯ ದಾಖಲೆಗಳನ್ನು ಬಹಿರಂಗ ಮಾಡಬೇಕು ಎನ್ನುವ ಬೇಡಿಕೆ ಹೆಚ್ಚಾಗಿತ್ತು. ನಿನ್ನೆ ನೇತಾಜಿ ಕುರಿತ ರಹಸ್ಯ ದಾಖಲೆಗಳನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿ ಕೋಲ್ಕತಾದಲ್ಲಿ ಬೋಸ್ ಕುಟುಂಬದ ಸದಸ್ಯರು ಹಾಗೂ ಬೆಂಬಲಿಗರು ರ್ಯಾಲಿ ಸಹ ನಡೆಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT