ಬಿಜೆಪಿ ಶಾಸಕ ಯೋಗಿ ಆದಿತ್ಯನಾಥ್ 
ದೇಶ

ಹಿಂದುಗಳಲ್ಲದವರನ್ನು ಹರಿದ್ವಾರದ ಪವಿತ್ರಸ್ಥಳಗಳಿಗೆ ಬಿಡಬಾರದು: ಯೋಗಿ ಆದಿತ್ಯನಾಥ್

ಹರಿದ್ವಾರದ ಹರ್ ಕಿ ಪೌರಿ, ಗಂಗಾನದಿ ಸೇರಿದಂತೆ ಇನ್ನಿತರೆ ಪವಿತ್ರ ಸ್ಥಾನಗಳಿಗೆ ಹೋಗಲು ಹಿಂದುಗಳಲ್ಲದ ಜನರಿಗೆ ಅವಕಾಶ ನೀಡಬಾರದು ಎಂದು ಬಿಜೆಪಿ ಶಾಸಕ ಯೋಗಿ ಆದಿತ್ಯನಾಥ್ ಮಂಗಳವಾರ ಹೇಳಿದ್ದಾರೆ...

ಹರಿದ್ವಾರ: ಹರಿದ್ವಾರದ ಹರ್ ಕಿ ಪೌರಿ, ಗಂಗಾನದಿ ಸೇರಿದಂತೆ ಇನ್ನಿತರೆ ಪವಿತ್ರ ಸ್ಥಾನಗಳಿಗೆ ಹೋಗಲು ಹಿಂದುಗಳಲ್ಲದ ಜನರಿಗೆ ಅವಕಾಶ ನೀಡಬಾರದು ಎಂದು ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಮಂಗಳವಾರ ಹೇಳಿದ್ದಾರೆ.

ಈ ಕುರಿತಂತೆ ಹರಿದ್ವಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಯೋಗಿ ಆದಿತ್ಯನಾಥ್, ಹಿಂದುಗಳನ್ನು ಬಿಟ್ಟು ಇನ್ಯಾವುದೇ ಧರ್ಮದ ಜನರನ್ನು ಹರಿದ್ವಾರದ ಪವಿತ್ರ ಸ್ಥಳಗಳಿಗೆ ಭೇಟಿ ನೀಡುವ ಅವಕಾಶವನ್ನು ರದ್ದು ಮಾಡಬೇಕು. ಇದಕ್ಕೆ ಪ್ರಮುಖ ಕಾರಣ ಭದ್ರತೆ ಹಾಗೂ ಪಾವಿತ್ರ್ಯತೆ ಎಂದು ಹೇಳಿದ್ದಾರೆ.

ಶಿವಸೇನೆ ಮುಖಪುಟ ಸಾಮ್ನಾ ಪತ್ರಿಕೆಯ ಸಂಪಾದಕೀಯದಲ್ಲಿ ಶಿವಸೇನೆ ನಾಯಕ ಎಂಪಿ ಸಂಜಯ್ ರಾವತ್ ಅವರು ನೀಡಿದ್ದ ವೋಟ್ ಬ್ಯಾಂಕ್ ರಾಜಕಾರಣ ತಡೆಯಲು ಮುಸ್ಲಿಮರ ಮತ ಹಕ್ಕನ್ನು ರದ್ದುಗೊಳಿಸಿ ಬೇಕು ಎಂಬ ಹೇಳಿಕೆ ಹಿನ್ನೆಲೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಯೋಗಿ ಆದಿತ್ಯನಾಥ್, ಮುಸ್ಲಿಮರಿಂದ ಪಾವಿತ್ರ್ಯ ಸ್ಥಳಗಳಿಗೆ ಅಪಾಯವಿದೆ. ಹಾಗಾಗಿ ನಮ್ಮ ಪವಿತ್ರ ಸ್ಥಳಗಳನ್ನು ಉಳಿಸಿಕೊಳ್ಳಬೇಕಾದರೆ ಈ ನಿಯಮವನ್ನು ಜಾರಿಗೆ ತರಬೇಕು. ಈ ನಿಯಮವನ್ನು ಅನುಷ್ಠಾನಕ್ಕೆ ತರಲು ಹಿಂದುಪರ ಸಂಘಟನೆಗಳು ಹಾಗೂ ಸಂತರು ಮುಂದೆ ಬರಬೇಕಿದೆ ಎಂದು ಹೇಳಿದ್ದಾರೆ.

ಯೋಗಿಆದಿತ್ಯನಾಥ್ ಅವರ ಈ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಕಿಶೋರ್ ಉಪಾಧ್ಯಾಯ ಅವರು, ಹಿಂದುಗಳಲ್ಲದ ಜನರು ಪವಿತ್ರ ಸ್ಥಳಗಳಿಗೆ ಅಪಾಯವಾದರೆ ಯೋಗಿ ಆದಿನಾಥ್ ಅವರು ಕೂಡ ಭಾರತಕ್ಕೆ ಪಾಕಿಸ್ತಾನಕ್ಕಿಂತ ದೊಡ್ಡ ಅಪಾಯದ ವ್ಯಕ್ತಿ. ಯೋಗಿ ಆದಿತ್ಯನಾಥ್ ಅವರ ಈ ರೀತಿಯ ಹೇಳಿಕೆಯು ದೇವಭೂಮಿಗೆ ಅವಮಾನ ಮಾಡಿದೆ. ಕೂಡಲೇ ತಮ್ಮ ಹೇಳಿಕೆಯನ್ನು ಹಿಂಪಡೆದು ಯೋಗಿ ಆದಿತ್ಯನಾಥ್ ಕ್ಷಮೆಯಾಚಿಸಬೇಕೆಂದು ಉಪಾಧ್ಯಾಯ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT