ದೇಶ

ಅಕ್ರಮ ಶಸ್ತ್ರಾಸ್ತ್ರ ಬಳಕೆ ಆರೋಪ: ಏ.23ರಂದು ಸಲ್ಮಾನ್ ಖಾನ್ ಹೇಳಿಕೆ ದಾಖಲು

Vishwanath S

ನವದೆಹಲಿ: ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಹಾಗೂ ಅವುಗಳನ್ನು ಬಳಸಿದ್ದ ಆರೋಪದ ಹಿನ್ನೆಲೆಯಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಏಪ್ರಿಲ್ 23 ರಂದು ಜೋಧಪುರ್ ನ್ಯಾಯಾಲಯದ ಮುಂದೆ ಹಾಜರಾಗಿ ಹೇಳಿಕೆ ನೀಡಲಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜೋಧಪುರ್ ನ್ಯಾಯಾಲಯದ ಮುಂದೆ ಹಾಜರಾಗುವ ಸಲ್ಮಾನ್ ಖಾನ್ ಪ್ರಕರಣ ಸಂಬಂದ ನೀಡುವ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗುತ್ತದೆ.

1988ರ ಅ.1ರಂದು ರಾಜಸ್ಥಾನದಲ್ಲಿ ಹಿಂದಿ ಚಿತ್ರ ಹಮ್ ಸಾಥ್ ಸಾಥ್ ಹೈ ಚಿತ್ರೀಕರಣದ ವೇಳೆ ತಮ್ಮ ಸಹ ನಟರೊಂದಿಗೆ ಅಳಿವಿನಂಚಿನಲ್ಲಿರುವ ಕೃಷ್ಣಮೃಗಗಳನ್ನು ಜೋಧಪುರ ಸಮೀಪದ ಕನಕಾನಿಯಲ್ಲಿ ಹತ್ಯೆ ಮಾಡಿದ ಆರೋಪ ಅವರ ಮೇಲಿದೆ. ಈ ಸಂಬಂಧ ಅರಣ್ಯ ಇಲಾಖೆ 1998ರ ಅಕ್ಟೋಬರ್ 15ರಂದು ಸಲ್ಮಾನ್ ವಿರುದ್ಧ ಅಕ್ರಮ ಶಸ್ತ್ರಾಸ್ತ್ರ ಬಳಕೆ ಸಂಬಂಧ ಪ್ರಕರಣ ದಾಖಲಿಸಿತ್ತು.

ಅಕ್ರಮ ಶಸ್ತ್ರಾಸ್ತ್ರ ಕಾಯ್ಡೆಯಡಿ ಲೂನಿ ಪೊಲೀಸರು ನಟ ಸಲ್ಮಾನ್ ಖಾನ್, ಸೈಫ್ ಅಲಿ ಖಾನ್, ಸೋನಾಲಿ ಬೇಂದ್ರೆ, ತಬು ಮತ್ತು ನೀಲಂ ಮೇಲೆ ಪ್ರಕರಣ ದಾಖಲಿಸಿದ್ದರು.

SCROLL FOR NEXT