ರಾಹುಲ್ ಗಾಂಧಿ 
ದೇಶ

ನಾಳೆ ರಾಹುಲ್ ಗಾಂಧಿಯಿಂದ ರೈತ ಮುಖಂಡರ ಭೇಟಿ

ಅಜ್ಞಾತವಾಸದಿಂದ ವಾಪಸಾಗಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ನಾಳೆ ದೆಹಲಿಯಲ್ಲಿ ವಿವಿಧ ರಾಜ್ಯಗಳ ರೈತ ಮುಖಂಡರನ್ನು ಭೇಟಿ ಮಾಡಿ,...

ನವದೆಹಲಿ: ಅಜ್ಞಾತವಾಸದಿಂದ ವಾಪಸಾಗಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ನಾಳೆ ದೆಹಲಿಯಲ್ಲಿ ವಿವಿಧ ರಾಜ್ಯಗಳ ರೈತ ಮುಖಂಡರನ್ನು ಭೇಟಿ ಮಾಡಿ, ಭೂಸ್ವಾದೀನ ಮಸೂದೆ ಕುರಿತು ಚರ್ಚಿಸಲಿದ್ದಾರೆ.

ಎನ್‌ಡಿಎ ಸರ್ಕಾರದ ಭೂಸ್ವಾಧೀನ ಮಸೂದೆ ವಿರುದ್ಧ ಕಾಂಗ್ರೆಸ್ ಭಾನುವಾರ ಬೃಹತ್ ಪ್ರತಿಭಟನಾ ರ್ಯಾಲಿ ಆಯೋಜಿಸಿದ್ದು, ಆ ರ್ಯಾಲಿಗೂ ಮುನ್ನಾ ದಿನವೇ ರಾಹುಲ್ ಗಾಂಧಿ ಅವರು ರೈತರ ನಿಯೋಗವನ್ನು ಭೇಟಿ ಮಾಡುತ್ತಿದ್ದಾರೆ.

ಉತ್ತರ ಪ್ರದೇಶ, ಹರಿಯಾಣ, ರಾಜಸ್ಥಾನ, ಪಂಜಾಬ ಮತ್ತು ಮಧ್ಯಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಿಂದ ಆಗಮಿಸುವ ರೈತ ಸಂಘಗಳ ಮುಖಂಡರನ್ನು ರಾಹುಲ್ ಭೇಟಿ ಮಾಡುತ್ತಿದ್ದು, ಈ ವೇಳೆ ಮಾಜಿ ಕೇಂದ್ರ ಸಚಿವ ಜೈರಾಮ್ ರಮೇಶ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಸೇರಿದಂತೆ ಹಲವು ಹಿರಿಯ ನಾಯಕರು ಉಪಸ್ಥಿತರಿರಲಿದ್ದಾರೆ.

ಏ.19ಕ್ಕೆ ನಡೆಯುವ ರೈತರ ಸಮಾವೇಶಕ್ಕೆ ದೇಶದ ವಿವಿಧ ಕಡೆಯಿಂದ ಲಕ್ಷಾಂತರ ರೈತರು ಆಗಮಿಸುತ್ತಿದ್ದು, ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಸೇರಿದಂತೆ ಇತರ ನಾಯಕರು ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ayodhya: ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣ: 8 ಆರೋಪಿಗಳ ವಿರುದ್ಧ FIR ದಾಖಲು!

Women T-20 World cup: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಭರ್ಜರಿ ಗೆಲುವು!

ಸೇಡಿಗಾಗಿ ಖಾಸಗಿ ಪೋಟೋ, ವಿಡಿಯೋ ವೈರಲ್, ಬೆದರಿಕೆ ಪ್ರಕರಣ: ಕಡ್ಡಾಯವಾಗಿ FIR ದಾಖಲಿಸಬೇಕು, ಪೊಲೀಸರಿಗೆ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ!

ಗರಿಷ್ಠ ಅವಧಿ ಸಂಪೂರ್ಣ: KSCA ಕಾರ್ಯದರ್ಶಿ ಸಂತೋಷ್ ಮೆನನ್ ಅನರ್ಹ, BCCI ಒಂಬುಡ್ಸ್‌ಮನ್ ಆದೇಶ!

Passport Fees Increases: ದೇಶದ ಜನತೆಗೆ ಕೇಂದ್ರದಿಂದ ಮತ್ತೊಂದು ಶಾಕ್! ಪಾಸ್ ಪೋರ್ಟ್ ಶುಲ್ಕ ಹೆಚ್ಚಳ, ಜು. 1 ರಿಂದ ಹೊಸ ದರಗಳು ಜಾರಿಗೆ