ಸುಭಾಷ್‌ಚಂದ್ರ ಬೋಸ್ 
ದೇಶ

ಬೋಸ್ ಕುಟುಂಬಕ್ಕೆ ಪ್ರಧಾನಿ ಆಹ್ವಾನ, ಮೇ 17ಕ್ಕೆ ನೇತಾಜಿ ಸಾವಿನ ರಹಸ್ಯ ಬಹಿರಂಗ ಸಾಧ್ಯತೆ

ಸ್ವಾತಂತ್ರ್ಯ ಸೇನಾನಿ ಸುಭಾಷ್‌ಚಂದ್ರ ಬೋಸ್ ಅವರ ನಿಗೂಢ ಸಾವಿನ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬೋಸ್ ಕುಟುಂಬದ 10 ಸದಸ್ಯರಿಗೆ ದೆಹಲಿ ಭೇಟಿಗೆ....

ನವದೆಹಲಿ: ಸ್ವಾತಂತ್ರ್ಯ ಸೇನಾನಿ ಸುಭಾಷ್‌ಚಂದ್ರ ಬೋಸ್ ಅವರ ನಿಗೂಢ ಸಾವಿನ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬೋಸ್ ಕುಟುಂಬದ 10 ಸದಸ್ಯರಿಗೆ ದೆಹಲಿ ಭೇಟಿಗೆ ಆಹ್ವಾನ ನೀಡಿದ್ದಾರೆ ಎಂದು ಸೋಮವಾರ ವರದಿಗಳು ತಿಳಿಸಿವೆ.

ವರದಿಗಳ ಪ್ರಕಾರ, ಪ್ರಧಾನಿ ಮೋದಿ ಅವರು ಬೋಸ್ ಕುಟುಂಬದ ಎಲ್ಲಾ ಸದಸ್ಯರನ್ನು ಭೇಟಿ ಮಾಡಲು ಬಯಸಿದ್ದು, ಮೇ 17ಕ್ಕೆ ದೆಹಲಿಗೆ ಬರುವಂತೆ ಆಹ್ವಾನ ಪತ್ರಿಕೆ ಕಳುಹಿಸಿದ್ದಾರೆ.

ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ ರಹಸ್ಯ ಕಡತಗಳನ್ನು ಬಹಿರಂಗಪಡಿಸುವ ಕುರಿತು ಕುಟುಂಬದೊಂದಿಗೆ ಚರ್ಚಿಸಿ, ಬಳಿಕ ಬಹಿರಂಗಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚಿಗಷ್ಟೆ ಬರ್ಲಿನ್‌ನಲ್ಲಿ ಬೋಸ್ ಸಂಬಂಧ ಸೂರ್ಯ ಕುಮಾರ್ ಬೋಸ್ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ಬೋಸ್ ಅವರಿಗೆ ಸಂಬಂಧಿಸಿದ ಕಡತಗಳನ್ನು ಬಹಿರಂಗಪಡಿಸುವ ಕುರಿತು ಪರಿಶೀಲಿಸುವುದಾಗಿ ಪ್ರಧಾನಿ ಭರವಸೆ ನೀಡಿದ್ದರು.

ಬೋಸ್ ಕುಟುಂಬದ ವಿರುದ್ಧ ನೆಹರೂ ಸರ್ಕಾರ ಎರಡು ದಶಕಗಳ ಕಾಲ ನಡೆಸಿದ ಬೇಹುಗಾರಿಕೆ ವಿಚಾರ ಸೋರಿಕೆಯಾಗುತ್ತಿದ್ದಂತೆ ನೇತಾಜಿ ಸಾವಿನ ಕುರಿತ ರಹಸ್ಯ ದಾಖಲೆಗಳನ್ನು ಬಹಿರಂಗ ಮಾಡಬೇಕು ಎನ್ನುವ ಬೇಡಿಕೆ ಹೆಚ್ಚಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT