ಸುಭಾಷ್‌ಚಂದ್ರ ಬೋಸ್ 
ದೇಶ

ಬೋಸ್ ಕುಟುಂಬಕ್ಕೆ ಪ್ರಧಾನಿ ಆಹ್ವಾನ, ಮೇ 17ಕ್ಕೆ ನೇತಾಜಿ ಸಾವಿನ ರಹಸ್ಯ ಬಹಿರಂಗ ಸಾಧ್ಯತೆ

ಸ್ವಾತಂತ್ರ್ಯ ಸೇನಾನಿ ಸುಭಾಷ್‌ಚಂದ್ರ ಬೋಸ್ ಅವರ ನಿಗೂಢ ಸಾವಿನ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬೋಸ್ ಕುಟುಂಬದ 10 ಸದಸ್ಯರಿಗೆ ದೆಹಲಿ ಭೇಟಿಗೆ....

ನವದೆಹಲಿ: ಸ್ವಾತಂತ್ರ್ಯ ಸೇನಾನಿ ಸುಭಾಷ್‌ಚಂದ್ರ ಬೋಸ್ ಅವರ ನಿಗೂಢ ಸಾವಿನ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬೋಸ್ ಕುಟುಂಬದ 10 ಸದಸ್ಯರಿಗೆ ದೆಹಲಿ ಭೇಟಿಗೆ ಆಹ್ವಾನ ನೀಡಿದ್ದಾರೆ ಎಂದು ಸೋಮವಾರ ವರದಿಗಳು ತಿಳಿಸಿವೆ.

ವರದಿಗಳ ಪ್ರಕಾರ, ಪ್ರಧಾನಿ ಮೋದಿ ಅವರು ಬೋಸ್ ಕುಟುಂಬದ ಎಲ್ಲಾ ಸದಸ್ಯರನ್ನು ಭೇಟಿ ಮಾಡಲು ಬಯಸಿದ್ದು, ಮೇ 17ಕ್ಕೆ ದೆಹಲಿಗೆ ಬರುವಂತೆ ಆಹ್ವಾನ ಪತ್ರಿಕೆ ಕಳುಹಿಸಿದ್ದಾರೆ.

ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ ರಹಸ್ಯ ಕಡತಗಳನ್ನು ಬಹಿರಂಗಪಡಿಸುವ ಕುರಿತು ಕುಟುಂಬದೊಂದಿಗೆ ಚರ್ಚಿಸಿ, ಬಳಿಕ ಬಹಿರಂಗಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚಿಗಷ್ಟೆ ಬರ್ಲಿನ್‌ನಲ್ಲಿ ಬೋಸ್ ಸಂಬಂಧ ಸೂರ್ಯ ಕುಮಾರ್ ಬೋಸ್ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ಬೋಸ್ ಅವರಿಗೆ ಸಂಬಂಧಿಸಿದ ಕಡತಗಳನ್ನು ಬಹಿರಂಗಪಡಿಸುವ ಕುರಿತು ಪರಿಶೀಲಿಸುವುದಾಗಿ ಪ್ರಧಾನಿ ಭರವಸೆ ನೀಡಿದ್ದರು.

ಬೋಸ್ ಕುಟುಂಬದ ವಿರುದ್ಧ ನೆಹರೂ ಸರ್ಕಾರ ಎರಡು ದಶಕಗಳ ಕಾಲ ನಡೆಸಿದ ಬೇಹುಗಾರಿಕೆ ವಿಚಾರ ಸೋರಿಕೆಯಾಗುತ್ತಿದ್ದಂತೆ ನೇತಾಜಿ ಸಾವಿನ ಕುರಿತ ರಹಸ್ಯ ದಾಖಲೆಗಳನ್ನು ಬಹಿರಂಗ ಮಾಡಬೇಕು ಎನ್ನುವ ಬೇಡಿಕೆ ಹೆಚ್ಚಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT