ಬೆಂಕಿ ಅವಘಡ 
ದೇಶ

ಚಲಿಸುತ್ತಿದ್ದ ಬಸ್‌ನಲ್ಲಿ ಅಗ್ನಿ ಅವಘಡ: 9 ಜನ ಸಜೀವ ದಹನ

ಚಲಿಸುತ್ತಿದ್ದ ಸರ್ಕಾರಿ ಬಸ್‌ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 9 ಮಂದಿ ಪ್ರಯಾಣಿಕರು ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದ...

ಅಮೇಥಿ: ಚಲಿಸುತ್ತಿದ್ದ ಸರ್ಕಾರಿ ಬಸ್‌ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 9 ಮಂದಿ ಪ್ರಯಾಣಿಕರು ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯ ಪೀಪಾರ್‌ಪುರ್‌ನಲ್ಲಿ ಸಂಭವಿಸಿದೆ.

42 ಜನ ಪ್ರಯಾಣಿಕರನ್ನು ಹೊತ್ತ ಬಸ್ ಸುಲ್ತಾನ್‌ಪುರಕ್ಕೆ ಹೋಗುತ್ತಿತ್ತು. ಈ ವೇಳೆ ಪೀಪಾರ್‌ಪುರ್‌ನ ರಾಮ್ ಗಾಂವ್ ಎಂಬ ಗ್ರಾಮದ ಬಳಿ ಬರುತ್ತಿದಂತೆ ಎಂಜಿನ್‌ನಲ್ಲಿ ಷಾರ್ಟ್ ಸರ್ಕ್ಯೂಟ್ ಆಗಿ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ 9 ಮಂದಿ ಸಜೀವ ದಹನವಾಗಿದ್ದು, ಆರು ಮಂದಿಗೆ ತೀವ್ರ ಸುಟ್ಟ ಗಾಯಗಳಾಗಿವೆ.

ಇನ್ನುಳಿದಂತೆ ಹಲವರು ಪ್ರಯಾಣಿಕರು ಕಿಟಕಿ ಗಾಜುಗಳನ್ನು ಒಡೆದು ಹೊರಬಂದಿದ್ದು, ಹೆಚ್ಚು ಪ್ರಾಣಹಾನಿ ಸಂಭವಿಸಿಲ್ಲ.

ಆದರೆ, 9 ಮಂದಿ ಬೆಂಕಿಗೆ ಆಹುತಿಯಾಗಿದ್ದಾರೆ. ಗಾಯಗೊಂಡಿರುವ ಆರು ಜನರ ಸ್ತಿತಿ ಚಿಂತಾಜನಕವಾಗಿದೆ  ಎಂದು  ಅಮೇಥಿ  ಪೊಲೀಸ್ ವರಿಷ್ಠಾಧಿಕಾರಿ ಹೀರಾಲಾಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

BRICS 2026: Modi-Putin ಭೇಟಿ; ಆಪ್ತ ಮಿತ್ರನಿಗೆ ಪ್ರಧಾನಿಯಿಂದ ಪವಿತ್ರ, ವಿಶೇಷ ಉಡುಗೊರೆ! Video

ದೇವಸ್ಥಾನದಲ್ಲಿ ಮೀನು ತಿಂದ ಸುವೇಂದು ಅಧಿಕಾರಿ: ಬಾಗೇಶ್ವರ್ ಬಾಬಾಗೆ ತಿರುಗೇಟು; CM ಮಾಂಸಾಹಾರ ಸೇವನೆ ಬಗ್ಗೆ ಬಿಜೆಪಿ ಹೇಳಿದ್ದೇನು? Video

ಕೊನೆಗೂ ಜೈಲಿನಲ್ಲಿ ಪ್ರಜ್ವಲ್‌ ರೇವಣ್ಣ ಬಳಸಿದ್ದ ಮೊಬೈಲ್‌ ಜಾಲ ಪತ್ತೆ: ಮೂವರು ಸಿಬ್ಬಂದಿ ಸೇರಿ 9 ಮಂದಿ ಬಂಧನ

ರಾಜತಾಂತ್ರಿಕತೆ: ಮೂರು ದಿನಗಳಲ್ಲಿ 15 ದ್ವಿಪಕ್ಷೀಯ ಸಭೆಗಳು; ಕ್ಸಿ ಜಿನ್ ಪಿಂಗ್, ವ್ಲಾಡಿಮಿರ್ ಪುಟಿನ್, ಪೆಜೆಶ್ಕಿಯಾನ್ ಮಾತುಕತೆ

KPSC ಹಗರಣ: ಗರ್ಲ್‌ಫ್ರೆಂಡ್‌ಗೆ ಗೋಲ್ಡ್, ಅಣ್ಣನಿಗೆ ವಿಲ್ಲಾ; ಅಭ್ಯರ್ಥಿಗಳ ಲಂಚದ ಹಣದಲ್ಲಿ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಾರುಬಾರು!