ಬೆಂಕಿ ಅವಘಡ 
ದೇಶ

ಚಲಿಸುತ್ತಿದ್ದ ಬಸ್‌ನಲ್ಲಿ ಅಗ್ನಿ ಅವಘಡ: 9 ಜನ ಸಜೀವ ದಹನ

ಚಲಿಸುತ್ತಿದ್ದ ಸರ್ಕಾರಿ ಬಸ್‌ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 9 ಮಂದಿ ಪ್ರಯಾಣಿಕರು ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದ...

ಅಮೇಥಿ: ಚಲಿಸುತ್ತಿದ್ದ ಸರ್ಕಾರಿ ಬಸ್‌ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 9 ಮಂದಿ ಪ್ರಯಾಣಿಕರು ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯ ಪೀಪಾರ್‌ಪುರ್‌ನಲ್ಲಿ ಸಂಭವಿಸಿದೆ.

42 ಜನ ಪ್ರಯಾಣಿಕರನ್ನು ಹೊತ್ತ ಬಸ್ ಸುಲ್ತಾನ್‌ಪುರಕ್ಕೆ ಹೋಗುತ್ತಿತ್ತು. ಈ ವೇಳೆ ಪೀಪಾರ್‌ಪುರ್‌ನ ರಾಮ್ ಗಾಂವ್ ಎಂಬ ಗ್ರಾಮದ ಬಳಿ ಬರುತ್ತಿದಂತೆ ಎಂಜಿನ್‌ನಲ್ಲಿ ಷಾರ್ಟ್ ಸರ್ಕ್ಯೂಟ್ ಆಗಿ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ 9 ಮಂದಿ ಸಜೀವ ದಹನವಾಗಿದ್ದು, ಆರು ಮಂದಿಗೆ ತೀವ್ರ ಸುಟ್ಟ ಗಾಯಗಳಾಗಿವೆ.

ಇನ್ನುಳಿದಂತೆ ಹಲವರು ಪ್ರಯಾಣಿಕರು ಕಿಟಕಿ ಗಾಜುಗಳನ್ನು ಒಡೆದು ಹೊರಬಂದಿದ್ದು, ಹೆಚ್ಚು ಪ್ರಾಣಹಾನಿ ಸಂಭವಿಸಿಲ್ಲ.

ಆದರೆ, 9 ಮಂದಿ ಬೆಂಕಿಗೆ ಆಹುತಿಯಾಗಿದ್ದಾರೆ. ಗಾಯಗೊಂಡಿರುವ ಆರು ಜನರ ಸ್ತಿತಿ ಚಿಂತಾಜನಕವಾಗಿದೆ  ಎಂದು  ಅಮೇಥಿ  ಪೊಲೀಸ್ ವರಿಷ್ಠಾಧಿಕಾರಿ ಹೀರಾಲಾಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT