ಬೆಂಕಿ ಅವಘಡ 
ದೇಶ

ಚಲಿಸುತ್ತಿದ್ದ ಬಸ್‌ನಲ್ಲಿ ಅಗ್ನಿ ಅವಘಡ: 9 ಜನ ಸಜೀವ ದಹನ

ಚಲಿಸುತ್ತಿದ್ದ ಸರ್ಕಾರಿ ಬಸ್‌ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 9 ಮಂದಿ ಪ್ರಯಾಣಿಕರು ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದ...

ಅಮೇಥಿ: ಚಲಿಸುತ್ತಿದ್ದ ಸರ್ಕಾರಿ ಬಸ್‌ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 9 ಮಂದಿ ಪ್ರಯಾಣಿಕರು ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯ ಪೀಪಾರ್‌ಪುರ್‌ನಲ್ಲಿ ಸಂಭವಿಸಿದೆ.

42 ಜನ ಪ್ರಯಾಣಿಕರನ್ನು ಹೊತ್ತ ಬಸ್ ಸುಲ್ತಾನ್‌ಪುರಕ್ಕೆ ಹೋಗುತ್ತಿತ್ತು. ಈ ವೇಳೆ ಪೀಪಾರ್‌ಪುರ್‌ನ ರಾಮ್ ಗಾಂವ್ ಎಂಬ ಗ್ರಾಮದ ಬಳಿ ಬರುತ್ತಿದಂತೆ ಎಂಜಿನ್‌ನಲ್ಲಿ ಷಾರ್ಟ್ ಸರ್ಕ್ಯೂಟ್ ಆಗಿ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ 9 ಮಂದಿ ಸಜೀವ ದಹನವಾಗಿದ್ದು, ಆರು ಮಂದಿಗೆ ತೀವ್ರ ಸುಟ್ಟ ಗಾಯಗಳಾಗಿವೆ.

ಇನ್ನುಳಿದಂತೆ ಹಲವರು ಪ್ರಯಾಣಿಕರು ಕಿಟಕಿ ಗಾಜುಗಳನ್ನು ಒಡೆದು ಹೊರಬಂದಿದ್ದು, ಹೆಚ್ಚು ಪ್ರಾಣಹಾನಿ ಸಂಭವಿಸಿಲ್ಲ.

ಆದರೆ, 9 ಮಂದಿ ಬೆಂಕಿಗೆ ಆಹುತಿಯಾಗಿದ್ದಾರೆ. ಗಾಯಗೊಂಡಿರುವ ಆರು ಜನರ ಸ್ತಿತಿ ಚಿಂತಾಜನಕವಾಗಿದೆ  ಎಂದು  ಅಮೇಥಿ  ಪೊಲೀಸ್ ವರಿಷ್ಠಾಧಿಕಾರಿ ಹೀರಾಲಾಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT