ಸಾಂದರ್ಭಿಕ ಚಿತ್ರ 
ದೇಶ

ಈ ಬಾರಿ ಸಾಧಾರಣ ಮಾನ್ಸೂನ್: ಕೇಂದ್ರ ಹವಾಮಾನ ಇಲಾಖೆ

ಅಕಾಲಿಕ ಮಳೆಯಿಂದ ತತ್ತರಿಸಿರುವ ದೇಶದ ಅನ್ನದಾತರಿಗೆ ಮತ್ತೊಂದು ಕಹಿ ಸುದ್ದಿ.....

ನವದೆಹಲಿ: ಅಕಾಲಿಕ ಮಳೆಯಿಂದ ತತ್ತರಿಸಿರುವ ದೇಶದ ಅನ್ನದಾತರಿಗೆ ಮತ್ತೊಂದು ಕಹಿ ಸುದ್ದಿ. ಈ ಬಾರಿ ಮುಂಗಾರು ಮಳೆ ಪ್ರಮಾಣ ಸರಾಸರಿಗಿಂತ ಕಡಿಮೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬುಧವಾರ ತಿಳಿಸಿದೆ.  

2015ರ ಹವಾಮಾನ ವರದಿ ಬಿಡುಗಡೆ ಮಾಡಿ ಮಾತನಾಡಿದ ಕೇಂದ್ರ ವಿಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಡಾ. ಹರ್ಷವರ್ಧನ್ ಅವರು, ಈ ಬಾರಿ  ಜೂನ್ ನಿಂದ ಸೆಪ್ಟಂಬರ್  ವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹೇಳಿದರು.

ಈ ವರ್ಷ ಶೇ. 33ರಷ್ಟು ಮಳೆ ಪ್ರಮಾಣ ಕಡಿಮೆಯಾಗಲಿದ್ದು, ಶೇ. 28 ರಷ್ಟು ಮುಂಗಾರು ಮಳೆಯಾಗೋ ಸಾಧ್ಯತೆಯಿದೆ ಎಂದು ಅವರು ತಿಳಿಸಿದ್ದಾರೆ.  

ಕಳೆದ ಕೆಲ ತಿಂಗಳುಗಳಿಂದ ಸುರಿದ ಅಕಾಲಿಕ ಮಳೆಯಿಂದ ದೇಶದ ಹಲವೆಡೆ ಬೆಳೆದಿದ್ದ ಬೆಳೆ ನಾಶವಾಗಿದ್ದು,  ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. 1997 ರಿಂದ 2006 ರವೆರೆಗೂ ಸಹಜವಾದ ಮಾನ್ಸೂನ್ ಮಳೆಯಾಗಿತ್ತು. ಆದರೆ ಈ ಬಾರಿ ಪೂರ್ವ ಹಾಗೂ ಮಧ್ಯ ಫೆಸಿಫಿಕ್ ಸಾಗರದಲ್ಲಿ ಅಸ್ವಾಭಾವಿಕ ತಾಪಮಾನ ಭಾರತೀಯ ಮಾನ್ಸೂನ್ ಮಳೆ ಮೇಲೆ ಪರಿಣಾಮ ಬೀರಿದೆ ಎಂದು ಅಂತಾರಾಷ್ಟ್ರೀಯ ಸಂಸ್ಥೆಗಳು ಸೂಚಿಸಿವೆ ಎಂದು ಸಚಿವರು ತಿಳಿಸಿದ್ದಾರೆ.

ಖಾಸಗಿ ಹವಾಮಾನ ಇಲಾಖೆ ಸ್ಕೈಮಟ್ ಈ ವರ್ಷ ಸಾಧಾರಣ ಮಳೆಯಾಗಲಿದೆ ಎಂದು ವರದಿ ನೀಡಿದೆ. ಕಳೆದ ವರ್ಷ ಕೇವಲ ಶೇ. 11.9ರಷ್ಟು ಮಾನ್ಸೂನ್ ಮಳೆಯಾಗಿತ್ತು. ಇದರಿಂದ ಉತ್ತರ ಪ್ರದೇಶ, ಪಂಜಾಬ್, ಹರ್ಯಾಣ ಮಹಾರಾಷ್ಟ್ರ, ಮಧ್ಯಪ್ರದೇಶ ಹಾಗೂ ತೆಲಂಗಾಣಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT