ಎಎಪಿ ಪ್ರತಿಭಟನಾ ರ್ಯಾಲಿಯಲ್ಲಿ ಕೇಜ್ರಿವಾಲ್ (ಸಂಗ್ರಹ ಚಿತ್ರ) 
ದೇಶ

ದೆಹಲಿಯಲ್ಲಿ ರೈತ ಆತ್ಮಹತ್ಯೆ, ಕೇಜ್ರಿವಾಲ್ ಮನೆ ಮುಂದೆ ಬಿಜೆಪಿ, ಕಾಂಗ್ರೆಸ್ ಪ್ರತಿಭಟನೆ

ಆಮ್ ಆದ್ಮಿ ಪಕ್ಷದ ಪ್ರತಿಭಟನಾ ರ್ಯಾಲಿ ವೇಳೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಘಟನೆಯನ್ನು...

ನವದೆಹಲಿ: ಆಮ್ ಆದ್ಮಿ ಪಕ್ಷದ ಪ್ರತಿಭಟನಾ ರ್ಯಾಲಿ ವೇಳೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಘಟನೆಯನ್ನು ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮುಂದೆ ಧರಣಿ ನಡೆಸುತ್ತಿದ್ದಾರೆ. ಮತ್ತೊಂದು ಕಡೆ ರ್ಯಾಲಿ ಆಯೋಜಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ದೆಹಲಿ ಪೊಲೀಸ್ ಪ್ರಧಾನ ಕಚೇರಿ ಮುಂದೆ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.

ಉತ್ತರ ದೆಹಲಿಯಲ್ಲಿರುವ ಕೇಜ್ರಿವಾಲ್ ಅವರ ನಿವಾಸ ಬಳಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಬೆಳಗ್ಗೆ 10ಗಂಟೆಯಿಂದ ಧರಣಿ ಕುಳಿತಿದ್ದು, ಕೇಜ್ರಿವಾಲ್ ರಾಜಿನಾಮೆಗೆ ಒತ್ತಾಯಿಸಿ ಘೋಷಣೆಗಳನ್ನು ಕೂಗುತ್ತಿದ್ದಾರೆ.

ದೆಹಲಿ ಪ್ರಧಾನ ಕಚೇರಿ ಬಳಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಸಹ ಐಟಿಒದಿಂದ ಕೇಜ್ರಿವಾಲ್ ಅವರ ನಿವಾಸದವರೆಗೆ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದೆ.

ಈ ವೇಳೆ ಮಾತನಾಡಿದ ದೆಹಲಿ ಬಿಜೆಪಿ ಅಧ್ಯಕ್ಷ ಸತೀಶ್ ಉಪಾಧ್ಯಾಯ ಅವರು, ರೈತನ ಆತ್ಮಹತ್ಯೆ ಘಟನೆಯ ಹಿಂದೆ ಪಿತೂರಿ ಇದೆ ಮತ್ತು ರ್ಯಾಲಿ ಆಯೋಜಕರ ವಿರುದ್ಧ ಕೊಲೆ ಕೇಸ್ ದಾಖಲಿಸಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT