ಎಎಪಿ ಪ್ರತಿಭಟನಾ ರ್ಯಾಲಿಯಲ್ಲಿ ಕೇಜ್ರಿವಾಲ್ (ಸಂಗ್ರಹ ಚಿತ್ರ) 
ದೇಶ

ದೆಹಲಿಯಲ್ಲಿ ರೈತ ಆತ್ಮಹತ್ಯೆ, ಕೇಜ್ರಿವಾಲ್ ಮನೆ ಮುಂದೆ ಬಿಜೆಪಿ, ಕಾಂಗ್ರೆಸ್ ಪ್ರತಿಭಟನೆ

ಆಮ್ ಆದ್ಮಿ ಪಕ್ಷದ ಪ್ರತಿಭಟನಾ ರ್ಯಾಲಿ ವೇಳೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಘಟನೆಯನ್ನು...

ನವದೆಹಲಿ: ಆಮ್ ಆದ್ಮಿ ಪಕ್ಷದ ಪ್ರತಿಭಟನಾ ರ್ಯಾಲಿ ವೇಳೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಘಟನೆಯನ್ನು ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮುಂದೆ ಧರಣಿ ನಡೆಸುತ್ತಿದ್ದಾರೆ. ಮತ್ತೊಂದು ಕಡೆ ರ್ಯಾಲಿ ಆಯೋಜಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ದೆಹಲಿ ಪೊಲೀಸ್ ಪ್ರಧಾನ ಕಚೇರಿ ಮುಂದೆ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.

ಉತ್ತರ ದೆಹಲಿಯಲ್ಲಿರುವ ಕೇಜ್ರಿವಾಲ್ ಅವರ ನಿವಾಸ ಬಳಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಬೆಳಗ್ಗೆ 10ಗಂಟೆಯಿಂದ ಧರಣಿ ಕುಳಿತಿದ್ದು, ಕೇಜ್ರಿವಾಲ್ ರಾಜಿನಾಮೆಗೆ ಒತ್ತಾಯಿಸಿ ಘೋಷಣೆಗಳನ್ನು ಕೂಗುತ್ತಿದ್ದಾರೆ.

ದೆಹಲಿ ಪ್ರಧಾನ ಕಚೇರಿ ಬಳಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಸಹ ಐಟಿಒದಿಂದ ಕೇಜ್ರಿವಾಲ್ ಅವರ ನಿವಾಸದವರೆಗೆ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದೆ.

ಈ ವೇಳೆ ಮಾತನಾಡಿದ ದೆಹಲಿ ಬಿಜೆಪಿ ಅಧ್ಯಕ್ಷ ಸತೀಶ್ ಉಪಾಧ್ಯಾಯ ಅವರು, ರೈತನ ಆತ್ಮಹತ್ಯೆ ಘಟನೆಯ ಹಿಂದೆ ಪಿತೂರಿ ಇದೆ ಮತ್ತು ರ್ಯಾಲಿ ಆಯೋಜಕರ ವಿರುದ್ಧ ಕೊಲೆ ಕೇಸ್ ದಾಖಲಿಸಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾನ್ ಬೆನ್ನೆಲುಬು ಮುರಿಯಲು ಅಮೆರಿಕಾ ಪ್ಲ್ಯಾನ್: 'Economic D-Day' ಘೋಷಣೆ; ನೆರವು ನೀಡುವ ರಾಷ್ಟ್ರಗಳಿಗೂ ಕಾದಿದೆ ಗಂಡಾಂತರ..!

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!