ರಾಹುಲ್ ಗಾಂಧಿ 
ದೇಶ

ಕೇದಾರನಾಥನ ದರ್ಶನಕ್ಕೆ ಹೊರಟ ಕಾಂಗ್ರೆಸ್ ಯುವರಾಜ

ಐಸಿಸಿ ಉಪಾಧ್ಯಾಕ್ಷ ರಾಹುಲ್ ಗಾಂಧಿ ಇಂದು ಕೇದಾರನಾಥ ಯಾತ್ರೆ ಆರಂಭಿಸಿದ್ದಾರೆ.....

ನವದೆಹಲಿ: ಬಜೆಟ್ ಅಧಿವೇಶನಕ್ಕೆ ಗೈರಾಗಿ 57 ದಿವಸಗಳ ಸುದೀರ್ಘ ಪ್ರವಾಸದಿಂದ ವಾಪಸಾಗಿರುವ ಎಐಸಿಸಿ ಉಪಾಧ್ಯಾಕ್ಷ ರಾಹುಲ್ ಗಾಂಧಿ ಇಂದು ಕೇದಾರನಾಥ ಯಾತ್ರೆ ಆರಂಭಿಸಿದ್ದಾರೆ.

ಉತ್ತಾರಖಂಡದ ಬೆಟ್ಟಸಾಲುಗಳಲ್ಲಿರುವ ಚಾರ್ ಧಾಮ್ ಗಳಲ್ಲಿ ಒಂದಾಗಿರುವ ಪ್ರಸಿದ್ಧ ಕೇದಾರನಾಥನಿಗೆ ಪೂಜೆ ಸಲ್ಲಿಸಲು ಕಾಂಗ್ರೆಸ್ ಯುವರಾಜ 18 ಕೀಮೀ ಕಾಲುನಡಿಗೆಯಲ್ಲಿ ತೆರಳಲಿದ್ದಾರೆ.

ಗುರುವಾರ ಬೆಳಗ್ಗೆ 11. 30ಕ್ಕೆ ರಾಹುಲ್ ಗಾಂಧಿ ಗೌರಿ ಕುಂಡದಿಂದ ಪಾದಯಾತ್ರೆ ಹೊರಡಲಿದ್ದಾರೆ.  

ರಾತ್ರಿ ಕೇದಾರನಾಥದಲ್ಲೇ ತಂಗಲಿರುವ ರಾಹುಲ್ ಗಾಂಧಿ ಶುಕ್ರವಾರ ಬೆಳಗ್ಗೆ 9. 30 ಕ್ಕೆ ಕೇದಾರನಾಥನಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ರಾಹುಲ್ ಗಾಂಧಿಗೆ ಅನೇಕ ಕಾಂಗ್ರೆಸ್ ನಾಯಕರು ಸಾಥ್ ನೀಡಲಿದ್ದಾರೆ.

ಹಿಮಾಲಯ ಬೆಟ್ಟ ಸಾಲುಗಳಲ್ಲಿರುವ ಚಾರ್ ಧಾಮ್ ಗಳಲ್ಲಿ  ಕೇದಾರನಾಥ ದೇಗುಲ ಸಮುದ್ರ ಮಟ್ಟದಿಂದ 11. 755 ಅಡಿ ಎತ್ತರದಲ್ಲಿದೆ. 2013 ರ ಜೂನ್ ನಲ್ಲಿ ಮೇಘಸ್ಫೋಟದಿಂದ  ಕೇದಾರನಾಥ ದೇವಾಲಯ ತತ್ತರಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

ಜಮ್ಮುವಿನಲ್ಲಿ 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ!

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

Techie Kidnap case: Lakshmi Menonಗೆ ಬಿಗ್ ರಿಲೀಫ್, ನಿರೀಕ್ಷಣಾ ಜಾಮೀನು ಮಂಜೂರು, ಏನಿದು ಪ್ರಕರಣ? ನಟಿ ಹೇಳಿದ್ದೇನು?

SCROLL FOR NEXT