ಅಶುತೋಷ್ 
ದೇಶ

ನಾನು ನಿನ್ನ ತಂದೆಯನ್ನು ರಕ್ಷಿಸಲಿಲ್ಲ ಎಂದು ಕಣ್ಣೀರಿಟ್ಟ ಆಪ್ ನಾಯಕ ಆಶುತೋಷ್

ಆಮ್ ಆದ್ಮಿ ಪಕ್ಷದ ಪ್ರತಿಭಟನಾ ರ್ಯಾಲಿಯ ವೇಳೆ ರಾಜಸ್ಥಾನ ಮೂಲದ ರೈತ ಗಜೇಂದ್ರ ಸಿಂಗ್ ಆತ್ಮಹತ್ಯೆ ಕುರಿತು ಅವರ ಮಗಳೊಂದಿಗೆ ಟಿವಿ ಮಾಧ್ಯಮದೊಂದಿಗೆ...

ನವದೆಹಲಿ: ಆಮ್ ಆದ್ಮಿ ಪಕ್ಷದ ಪ್ರತಿಭಟನಾ ರ್ಯಾಲಿಯ ವೇಳೆ ರಾಜಸ್ಥಾನ ಮೂಲದ ರೈತ ಗಜೇಂದ್ರ ಸಿಂಗ್ ಆತ್ಮಹತ್ಯೆ ಕುರಿತು ಅವರ ಮಗಳೊಂದಿಗೆ ಟಿವಿ ಮಾಧ್ಯಮದೊಂದಿಗೆ ನೇರ ಪ್ರಸಾರದಲ್ಲಿ ಮಾತನಾಡುತ್ತಿದ್ದ ವೇಳೆ ಆಪ್ ನಾಯಕ ಆಶುತೋಷ್ ಅವರು ಭಾವೋದ್ವೇಗಕ್ಕೆ ಒಳಗಾಗಿ ಕಣ್ಣೀರಿಟ್ಟ ಘಟನೆ ನಡೆಯಿತು.

'ನಾನು ತಪ್ಪಿತಸ್ಥ ಮೇಘಾ... ನಿನ್ನ ತಂದೆಯನ್ನು ಉಳಿಸಲು ಸಾಧ್ಯವಾಗಲಿಲ್ಲ. ಎಂದು ಗಜೇಂದ್ರ ಸಿಂಗ್ ಅವರ ಪುತ್ರಿ ಮೇಘಾ ಜೊತೆ ಮೊಬೈಲ್ ನಲ್ಲಿ ಮಾತನಾಡುತ್ತ ಗೋಳೋ ಎಂದು ಅಶುತೋಷ್  ಬಿಕ್ಕಿ ಬಿಕ್ಕಿ ಅತ್ತರು.

ಇದೇ ವೇಳೆ ದಯಮಿಟ್ಟು ಗಜೇಂದ್ರ ಸಿಂಗ್ ಸಾವಿನ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಎಂದು ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರಲ್ಲಿ ಅಶುತೋಷ್ ಮನವಿ ಮಾಡಿಕೊಂಡರು.

ಗಜೇಂದ್ರ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಬೆಳಗ್ಗೆಯಷ್ಟೇ ನನ್ನಿಂದ ತಪ್ಪಾಗಿದೆ. ಸಿಂಗ್ ಆತ್ಮಹತ್ಯೆ ಪ್ರಯತ್ನದ ನಂತರವೂ ಭಾಷಣ ಮುಂದುವರಿಸಿದ್ದೆ. ನನ್ನಿಂದ ತಪ್ಪಾಗಿದ್ದರೆ ಕ್ಷಮಿಸಿ ಎಂದು ಹೇಳಿದ್ದರು.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕ್ಷಮಾಪಣೆ ಕೋರಿದ ಬೆನ್ನಲ್ಲೇ ಮತ್ತೊಬ್ಬ ಮುಖಂಡ ಅಶುತೋಷ್ ಟಿವಿ ಚಾನೆಲ್ ಚರ್ಚೆಯ ಸಂದರ್ಭದಲ್ಲಿ ಸಿಂಗ್ ಮಗಳ ಜೊತೆ ಮಾತನಾಡುತ್ತ ಕಣ್ಣೀರಿಟ್ಟ ಘಟನೆ ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT