ಶಿವರಾಜಕುಮಾರ್ 
ದೇಶ

ಪ್ರತ್ಯೇಕ ರಾಜ್ಯದ ಮಾತು ಬಿಟ್ಟುಬಿಡಿ: ನಟ ಶಿವರಾಜಕುಮಾರ್

ರಾಜ್ಯದ ಸಮಸ್ಯೆಗೆ ಕನ್ನಡಿಗರೆಲ್ಲರೂ ಒಂದಾಗಿ ಹೋರಾಡಬೇಕೇ ಹೊರತು ಪ್ರತ್ಯೇಕತೆಯ ಮಾತು ಎತ್ತಬಾರದು ಎಂದು ನಟ ಡಾ. ಶಿವರಾಜಕುಮಾರ್...

ಬೆಳಗಾವಿ: ರಾಜ್ಯದ ಸಮಸ್ಯೆಗೆ ಕನ್ನಡಿಗರೆಲ್ಲರೂ ಒಂದಾಗಿ ಹೋರಾಡಬೇಕೇ ಹೊರತು ಪ್ರತ್ಯೇಕತೆಯ ಮಾತು ಎತ್ತಬಾರದು ಎಂದು ನಟ ಡಾ. ಶಿವರಾಜಕುಮಾರ್ ಪ್ರತ್ಯೇಕ ರಾಜ್ಯದ ಕೂಗು ಹಾಕುವ ನಾಯಕರಿಗೆ ಮನವಿ ಮಾಡಿದ್ದಾರೆ.

ನಗರದ ಸಿಪಿಎಡ್ ಮೈದಾನದಲ್ಲಿ ಭಾನುವಾರ ಜಿಲ್ಲಾ ಕಲಾ ಕಂಠೀರವ ಡಾ. ಶಿವರಾಜಕುಮಾರ ಅಭಿಮಾನಿಗಳ ಸಂಘದ 15ನೇ ವರ್ಷದ ವಾರ್ಷಿಕೋತ್ಸವ ಹಾಗೂ ಡಾ. ರಾಜಕುಮಾರ್ ಹುಟ್ಟು ಹಬ್ಬದ ಪ್ರಯುಕ್ತ ಏರ್ಪಡಿಸಿದ್ದ ನೇತ್ರದಾನ ಶಿಬಿರ ಮತ್ತು ಅಂಗವಿಕಲರಿಗೆ ಕೋಲು ವಿತರಣೆ ಸಮಾರಂಭದ ಬಳಿಕ ಮಾಧ್ಯಮದ ಜತೆಗೆ ಮಾತನಾಡಿದರು.

ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡುವುದಕ್ಕೆ ಅವಕಾಶ ನೀಡಬಾರದು. ಅಖಂಡ ಕರ್ನಾಟಕಕ್ಕೆ ಯಾವುದೇ ಕಾರಣಕ್ಕೂ ಧಕ್ಕೆಯಾಗಬಾರದು. ಇನ್ನು ಮುಂದೆ ಉತ್ತರ ಕರ್ನಾಟಕದ ಯಾವುದೇ ಸಮಸ್ಯೆಗೂ ಚಿತ್ರನಟರ ಪರ ನಾವು ಹೋರಾಟಕ್ಕೆ ನಿಲ್ಲುತ್ತೇವೆ. ರಾಜ್ಯ ಒಡೆಯುವ ಮಾತನಾಡುವ ನಾಯಕರಲ್ಲಿ ಮನವಿ ಮಾಡುತ್ತೇನೆ. ನಾವು ಒಂದಾಗಿ ಹೋರಾಟ ಮಾಡೋಣ. ಪ್ರತ್ಯೇಕತೆ ಮಾತು ಮರೆಯೋಣ.

ಮೇಕೆದಾಟು, ಕಾವೇರಿ ಮತ್ತು ಕಳಸಾ ಬಂಡೂರಿ, ಕೃಷ್ಣಾ ಯೋಜನೆಗಳ ವಿಚಾರದಲ್ಲಿ ಕನ್ನಡಿಗರು ಒಬ್ಬರಿಗೊಬ್ಬರು ಚಿಕ್ಕಮಕ್ಕಳಂತೆ ಗಲಾಟೆ ಮಾಡಿಕೊಳ್ಳುವುದು ಸರಿಯಲ್ಲ. ಎಲ್ಲರೂ ಒಂದಾಗಿದ್ದರಷ್ಟೇ ಹೋರಾಟಕ್ಕೆ ಶಕ್ತಿ. ಕಳಸಾ ಬಂಡೂರಿ ಹೋರಾಟಕ್ಕೆ ನನ್ನ ಬೆಂಬಲವಿದೆ. ನೀವು ಕರೆದರೆ ನಾನು ಬಂದೇ ಬರುತ್ತೇನೆ. ಬಾರದಿದ್ದರೆ ಮನೆಗೆ ಬಂದು ಎಳೆದುಕೊಂಡು ಬನ್ನಿ ಎಂದು ಶಿವರಾಜ್ ಕುಮಾರ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT