ವಿತ್ತ ಸಚಿವ ಅರುಣ್ ಜೇಟ್ಲಿ 
ದೇಶ

ಭೂ ಸುಗ್ರೀವಾಜ್ಞೆ ಅಂಗೀಕಾರಕ್ಕೆ ಜಂಟಿ ಅಧಿವೇಶನ?

ಮೋದಿ ಸರ್ಕಾರಕ್ಕೆ ಪ್ರತಿಷ್ಠೆ ವಿಧೇಯಕ ಅಂಗೀಕಾರಕ್ಕೆ ಸಂಸತ್‍ನ ಜಂಟಿ ಅಧಿವೇಶನ ಕರೆಯುವ ಸಾಧ್ಯತೆ ತಳ್ಳಿಹಾಕಿಲ್ಲ ಕೇಂದ್ರ ಸರ್ಕಾರ. ಇಂಥ ಒಂದು ಸುಳಿವು ನೀಡಿದ್ದು ಹಣಕಾಸು ಸಚಿವ ಅರುಣ್ ಜೇಟ್ಲಿ...

ನವದೆಹಲಿ: ಮೋದಿ ಸರ್ಕಾರಕ್ಕೆ ಪ್ರತಿಷ್ಠೆ ವಿಧೇಯಕ ಅಂಗೀಕಾರಕ್ಕೆ ಸಂಸತ್‍ನ ಜಂಟಿ ಅಧಿವೇಶನ ಕರೆಯುವ ಸಾಧ್ಯತೆ ತಳ್ಳಿಹಾಕಿಲ್ಲ ಕೇಂದ್ರ ಸರ್ಕಾರ. ಇಂಥ ಒಂದು ಸುಳಿವು ನೀಡಿದ್ದು ಹಣಕಾಸು ಸಚಿವ ಅರುಣ್ ಜೇಟ್ಲಿ.

ಸಂದರ್ಶನದಲ್ಲಿ ಮಾತನಾಡಿದ ಅವರು ಸರ್ಕಾರದ ಮೊದಲ ಆದ್ಯತೆ ರಾಜ್ಯಸಭೆಯಲ್ಲಿ ಅದನ್ನು ಅಂಗೀಕರಿಸಲು ಪ್ರಯತ್ನಿಸಲಾಗುತ್ತದೆ ಎಂದಿದ್ದಾರೆ. ಒಂದು ವೇಳೆ ಇದೇ ವಿಚಾರಕ್ಕೆ ಜಂಟಿ ಅಧಿವೇಶನ ಕರೆದರೂ ಇದೇನೂ ಮೊದಲ ಅಥವಾ ಕೊನೆಯ ಬಾರಿ ಅಲ್ಲವಲ್ಲ ಎಂದು ಪ್ರಶ್ನಿಸಿದರು.

ಸಿಗಲಿದೆ ಹೆಚ್ಚು ಪರಿಹಾರ: ಭಾರಿ ಮಳೆಯಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರ ಕಣ್ಣೀರನ್ನು ಕೇಂದ್ರ ಒರೆಸಲಿದೆ. ಹಿಂದಿನ ಯುಪಿಎ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರವನ್ನು
ಶೀಘ್ರವೇ ನೀಡುತ್ತೇವೆ. ಕೃಷಿ ಕ್ಷೇತ್ರ ಅನುಭವಿಸುತ್ತಿರುವ ನೀರಾವರಿ ಸಮಸ್ಯೆಗೆ ತಕ್ಷಣಕ್ಕೆ ಪರಿಹಾರ ಕಲ್ಪಿಸಲಾಗದು. ಅದಕ್ಕೆ ದೀರ್ಘಾವಧಿಯನ್ನು ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳಬೇಕಾಗಿದೆ. ತಾತ್ಕಾಲಿಕ ಕ್ರಮದಿಂದ ಏನೇನೂ ಲಾಭವಿಲ್ಲ ಎಂದಿದ್ದಾರೆ ಅರುಣ್ ಜೇಟ್ಲಿ. ಬಾಡಿಗೆಯ ಕಾರಣಗಳು: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕಳೆದ ಕೆಲ ದಿನಗಳಿಂದ ಸಕ್ರಿಯವಾಗಿರುವುದನ್ನು ಜೇಟ್ಲಿ ಲೇವಡಿ ಮಾಡಿದ್ದಾರೆ. ಅವರು ಕಾರಣಗಳನ್ನು ಬಾಡಿಗೆಗೆ ತೆಗೆದುಕೊಂಡಂತೆ ಮಾತನಾಡುತ್ತಿದ್ದಾರೆ. ಹೀಗಾಗಿ, ಕಾಂಗ್ರೆಸ್ ಉಪಾಧ್ಯಕ್ಷ ರಾಜಕೀಯದಲ್ಲಿ ಹೊಂದಿರುವ ನಿಷ್ಠೆ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT