ಭರದಿಂದ ಸಾಗಿರುವ ರಕ್ಷಣಾ ಕಾರ್ಯಾಚರಣೆ 
ದೇಶ

ನೇಪಾಳ ಭೂಕಂಪನ ದುರಂತ: 20 ಸಾವಿರ ಭಾರತೀಯರ ರಕ್ಷಣೆ

ಭೀಕರ ಭೂಕಂಪನದಿಂದಾಗಿ ತತ್ತರಿಸಿ ಹೋಗಿರುವ ನೇಪಾಳದಲ್ಲಿ ಅಪಾಯಕ್ಕೆ ಸಿಲುಕಿದ್ದ ಸುಮಾರು 20 ಸಾವಿರ ಮಂದಿ ಭಾರತೀಯರನ್ನು ರಕ್ಷಿಸಲಾಗಿದೆ...

ಕಠ್ಮಂಡು: ಭೀಕರ ಭೂಕಂಪನದಿಂದಾಗಿ ತತ್ತರಿಸಿ ಹೋಗಿರುವ ನೇಪಾಳದಲ್ಲಿ ಅಪಾಯಕ್ಕೆ ಸಿಲುಕಿದ್ದ ಸುಮಾರು 20 ಸಾವಿರ ಮಂದಿ ಭಾರತೀಯರನ್ನು ರಕ್ಷಿಸಲಾಗಿದೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ನೇಪಾಳದಲ್ಲಿ ಉಂಟಾಗಿರುವ ಭೂಕಂಪನದಿಂದಾಗಿ ಅಪಾಯದಲ್ಲಿ ಸಿಲುಕಿರುವ ಭಾರತೀಯರಿಗಾಗಿ ನಡೆಯುತ್ತಿರುವ ಕಾರ್ಯಾಚರಣೆ ಕುರಿತು ಮಾಹಿತಿ ನೀಡಿದ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರು, ಈ ವರೆಗೂ ನೇಪಾಳದಲ್ಲಿ ಸುಮಾರು 20 ಸಾವಿರ ಮಂದಿ ಭಾರತೀಯರನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿಸಿದರು.

"ನೇಪಾಳದಲ್ಲಿ ಅಪಾಯಕ್ಕೆ ಸಿಲುಕಿರುವ ಭಾರತೀಯರ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ವಿವಿಧ ಸ್ಥಳಗಳಲ್ಲಿ ಅಪಾಯಕ್ಕೆ ಸಿಲುಕಿದ್ದ ಸುಮಾರು 20 ಸಾವಿರ ಮಂದಿ ಭಾರತೀಯರು ಸುರಕ್ಷಿತವಾಗಿ ರಕ್ಸಾಲ್ ಪ್ರದೇಶವನ್ನು ತಲುಪಿದ್ದು, ರೈಲಿನ ಮುಖಾಂತರ ಅವರನ್ನು ವಿವಿಧ ಸ್ಥಳಾಂತರ ಮಾಡಲಾಗುವುದು. ಭಾರತೀಯರನ್ನು ಸುರಕ್ಷಿತವಾಗಿ ಅವರ ಸ್ವಸ್ಥಾನಕ್ಕೆ ಸೇರಿಸಲು ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದ್ದು, ಪ್ರತಿ ರೈಲಿಗೂ 7 ಬೋಗಿಗಳನ್ನು ಹೆಚ್ಚುವರಿಯಾಗಿ ಅಳವಡಿಸುವಂತೆ ಸೂಚಿಸಲಾಗಿದೆ" ಎಂದು ಪ್ರಧಾನ್ ಹೇಳಿದರು.

ಅಲ್ಲದೆ ಈ ಎಲ್ಲ ವಿಶೇಷ ರೈಲುಗಳಿಗೆ ಕೋಲ್ಕತಾದಲ್ಲಿ ಹೆಚ್ಚುವರಿ ಬೋಗಿಗಳನ್ನು ಅಲವಡಿಸಲಾಗುತ್ತದೆ. ಅಲ್ಲಿಂದ ನೇಪಾಳದ ಕಠ್ಮಂಡುವಿಗೆ ಈ ವಿಶೇಷ ರೈಲು ಪ್ರಯಾಣಿಸುತ್ತದೆ. ಅಲ್ಲದೆ ನೇಪಾಳಿ ಹಣದೊಂದಿಗೆ ಆಗಮಿಸುವ ಪ್ರಯಾಣಿಕರಿಗಾಗಿ ಸ್ಟೇಟ್ ಬ್ಯಾಂಕ್ ಇಂಡಿಯಾ ವತಿಯಿಂದ ರಕ್ಸಾಲ್ ನಲ್ಲಿ ವಿಶೇಷ ಶಾಖೆ ತೆರೆದು ಅಲ್ಲಿ ಹಣವನ್ನು ವಿನಿಮಯ ಮಾಡಿಕೊಳ್ಳುವ ಅವಕಾಶ ಕಲ್ಪಿಸಲಾಗಿದೆ.

ಇನ್ನು ನೇಪಾಳ ಮತ್ತು ಭಾರತ ನಡುವೆ ಸಂಪರ್ಕ ಕಲ್ಪಿಸುವ ಎನ್ಎಚ್-28 ಭೂಕಂಪನದಿಂದಾಗಿ ಹಾಳಾಗಿದ್ದು, ರಕ್ಷಣಾ ಸಮಾಗ್ರಿಗಳನ್ನು ರವಾನೆ ಮಾಡಲು ತೀವ್ರ ಅಡಚಣೆಯಾಗಿದೆ. ಹೀಗಾಗಿ ಸಂಬಂಧ ಪಟ್ಟ ಅಧಿಕಾರಿಗಳು ಕೂಡಲೇ ತುರ್ತಾಗಿ ರಸ್ತೆಯನ್ನು ರಿಪೇರಿ ಮಾಡುವಂತೆ ಸೂಚಿಸಲಾಗಿದೆ ಎಂದು ಪ್ರಧಾನ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಒಟ್ಟಾರೆ ನೇಪಾಳದಲ್ಲಿ ನಡೆದ ಭೀಕರ ಭೂಕಂಪನದಲ್ಲಿ ಸಿಲುಕಿರುವ ಅಪಾರ ಪ್ರಮಾಣದ ಭಾರತೀಯರ ರಕ್ಷಣೆಗಾಗಿ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದು, ಶೀಘ್ರದಲ್ಲಿಯೇ ಸಂರಕ್ಷಿತರನ್ನು ಅವರವರ ಸ್ವಸ್ಥಾನಗಳಿಗೆ ರವಾನಿಸಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT