ಭರದಿಂದ ಸಾಗಿರುವ ರಕ್ಷಣಾ ಕಾರ್ಯಾಚರಣೆ 
ದೇಶ

ನೇಪಾಳ ಭೂಕಂಪನ ದುರಂತ: 20 ಸಾವಿರ ಭಾರತೀಯರ ರಕ್ಷಣೆ

ಭೀಕರ ಭೂಕಂಪನದಿಂದಾಗಿ ತತ್ತರಿಸಿ ಹೋಗಿರುವ ನೇಪಾಳದಲ್ಲಿ ಅಪಾಯಕ್ಕೆ ಸಿಲುಕಿದ್ದ ಸುಮಾರು 20 ಸಾವಿರ ಮಂದಿ ಭಾರತೀಯರನ್ನು ರಕ್ಷಿಸಲಾಗಿದೆ...

ಕಠ್ಮಂಡು: ಭೀಕರ ಭೂಕಂಪನದಿಂದಾಗಿ ತತ್ತರಿಸಿ ಹೋಗಿರುವ ನೇಪಾಳದಲ್ಲಿ ಅಪಾಯಕ್ಕೆ ಸಿಲುಕಿದ್ದ ಸುಮಾರು 20 ಸಾವಿರ ಮಂದಿ ಭಾರತೀಯರನ್ನು ರಕ್ಷಿಸಲಾಗಿದೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ನೇಪಾಳದಲ್ಲಿ ಉಂಟಾಗಿರುವ ಭೂಕಂಪನದಿಂದಾಗಿ ಅಪಾಯದಲ್ಲಿ ಸಿಲುಕಿರುವ ಭಾರತೀಯರಿಗಾಗಿ ನಡೆಯುತ್ತಿರುವ ಕಾರ್ಯಾಚರಣೆ ಕುರಿತು ಮಾಹಿತಿ ನೀಡಿದ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರು, ಈ ವರೆಗೂ ನೇಪಾಳದಲ್ಲಿ ಸುಮಾರು 20 ಸಾವಿರ ಮಂದಿ ಭಾರತೀಯರನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿಸಿದರು.

"ನೇಪಾಳದಲ್ಲಿ ಅಪಾಯಕ್ಕೆ ಸಿಲುಕಿರುವ ಭಾರತೀಯರ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ವಿವಿಧ ಸ್ಥಳಗಳಲ್ಲಿ ಅಪಾಯಕ್ಕೆ ಸಿಲುಕಿದ್ದ ಸುಮಾರು 20 ಸಾವಿರ ಮಂದಿ ಭಾರತೀಯರು ಸುರಕ್ಷಿತವಾಗಿ ರಕ್ಸಾಲ್ ಪ್ರದೇಶವನ್ನು ತಲುಪಿದ್ದು, ರೈಲಿನ ಮುಖಾಂತರ ಅವರನ್ನು ವಿವಿಧ ಸ್ಥಳಾಂತರ ಮಾಡಲಾಗುವುದು. ಭಾರತೀಯರನ್ನು ಸುರಕ್ಷಿತವಾಗಿ ಅವರ ಸ್ವಸ್ಥಾನಕ್ಕೆ ಸೇರಿಸಲು ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದ್ದು, ಪ್ರತಿ ರೈಲಿಗೂ 7 ಬೋಗಿಗಳನ್ನು ಹೆಚ್ಚುವರಿಯಾಗಿ ಅಳವಡಿಸುವಂತೆ ಸೂಚಿಸಲಾಗಿದೆ" ಎಂದು ಪ್ರಧಾನ್ ಹೇಳಿದರು.

ಅಲ್ಲದೆ ಈ ಎಲ್ಲ ವಿಶೇಷ ರೈಲುಗಳಿಗೆ ಕೋಲ್ಕತಾದಲ್ಲಿ ಹೆಚ್ಚುವರಿ ಬೋಗಿಗಳನ್ನು ಅಲವಡಿಸಲಾಗುತ್ತದೆ. ಅಲ್ಲಿಂದ ನೇಪಾಳದ ಕಠ್ಮಂಡುವಿಗೆ ಈ ವಿಶೇಷ ರೈಲು ಪ್ರಯಾಣಿಸುತ್ತದೆ. ಅಲ್ಲದೆ ನೇಪಾಳಿ ಹಣದೊಂದಿಗೆ ಆಗಮಿಸುವ ಪ್ರಯಾಣಿಕರಿಗಾಗಿ ಸ್ಟೇಟ್ ಬ್ಯಾಂಕ್ ಇಂಡಿಯಾ ವತಿಯಿಂದ ರಕ್ಸಾಲ್ ನಲ್ಲಿ ವಿಶೇಷ ಶಾಖೆ ತೆರೆದು ಅಲ್ಲಿ ಹಣವನ್ನು ವಿನಿಮಯ ಮಾಡಿಕೊಳ್ಳುವ ಅವಕಾಶ ಕಲ್ಪಿಸಲಾಗಿದೆ.

ಇನ್ನು ನೇಪಾಳ ಮತ್ತು ಭಾರತ ನಡುವೆ ಸಂಪರ್ಕ ಕಲ್ಪಿಸುವ ಎನ್ಎಚ್-28 ಭೂಕಂಪನದಿಂದಾಗಿ ಹಾಳಾಗಿದ್ದು, ರಕ್ಷಣಾ ಸಮಾಗ್ರಿಗಳನ್ನು ರವಾನೆ ಮಾಡಲು ತೀವ್ರ ಅಡಚಣೆಯಾಗಿದೆ. ಹೀಗಾಗಿ ಸಂಬಂಧ ಪಟ್ಟ ಅಧಿಕಾರಿಗಳು ಕೂಡಲೇ ತುರ್ತಾಗಿ ರಸ್ತೆಯನ್ನು ರಿಪೇರಿ ಮಾಡುವಂತೆ ಸೂಚಿಸಲಾಗಿದೆ ಎಂದು ಪ್ರಧಾನ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಒಟ್ಟಾರೆ ನೇಪಾಳದಲ್ಲಿ ನಡೆದ ಭೀಕರ ಭೂಕಂಪನದಲ್ಲಿ ಸಿಲುಕಿರುವ ಅಪಾರ ಪ್ರಮಾಣದ ಭಾರತೀಯರ ರಕ್ಷಣೆಗಾಗಿ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದು, ಶೀಘ್ರದಲ್ಲಿಯೇ ಸಂರಕ್ಷಿತರನ್ನು ಅವರವರ ಸ್ವಸ್ಥಾನಗಳಿಗೆ ರವಾನಿಸಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

ಅಯೋಧ್ಯೆ ಟ್ರಸ್ಟ್ ಎಸ್‌ಐಟಿ ವರದಿಯನ್ನು ಬಹಿರಂಗ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ತನ್ನ ಕ್ರಿಕೆಟ್ ವೃತ್ತಿ ಜೀವನದಲ್ಲೇ The Best Catch ಹಿಡಿದ ಶುಭಮನ್ ಗಿಲ್: ಅವಕ್ಕಾಗಿ ನಿಂತ ಲಂಕಾ ಬ್ಯಾಟರ್, Video

Jharkhand: ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿಯಾಗಿ, ನೇಮಕಾತಿ ಪರೀಕ್ಷೆ ವಿವಾದ ಬಗೆಹರಿಸಿ: ಸಿಎಂ ಸೊರೆನ್‌ಗೆ ರಾಹುಲ್ ಗಾಂಧಿ ಮನವಿ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ, ಜೆಡಿಎಸ್ ಬಿಗಿ ಪಟ್ಟು; ವಿಧಾನಸಭೆಯಲ್ಲಿ ತೀವ್ರ ಕೋಲಾಹಲ