ಅರವಿಂದ್ ಕೇಜ್ರಿವಾಲ್ 
ದೇಶ

ನಕಲಿ ಪ್ರಮಾಣಪತ್ರ ವಿವಾದ: ಕಾನೂನು ಸಚಿವ ತೊಮರ್‌ರಿಂದ ವಿವರಣೆ ಕೇಳಿದ ಕೇಜ್ರಿವಾಲ್

ದೆಹಲಿ ಕಾನೂನು ಸಚಿವ ಜಿತೇಂದರ್ ಸಿಂಗ್ ತೊಮರ್ ಅವರ ವಿರುದ್ಧ ಎದ್ದಿರುವ ನಕಲಿ ಕಾನೂನು ಪದವಿ ಪತ್ರ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿವರಣೆ ಕೇಳಿದ್ದಾರೆ...

ನವದೆಹಲಿ: ದೆಹಲಿ ಕಾನೂನು ಸಚಿವ ಜಿತೇಂದರ್ ಸಿಂಗ್ ತೊಮರ್ ಅವರ ವಿರುದ್ಧ ಎದ್ದಿರುವ ನಕಲಿ ಕಾನೂನು ಪದವಿ ಪತ್ರ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿವರಣೆ ಕೇಳಿದ್ದಾರೆ.

ಇತ್ತೀಚೆಗಷ್ಟೆ ಆಮ್ ಆದ್ಮಿ ಪಕ್ಷದ ಹಿರಿಯ ಮುಖಂಡರಾದ ಯೋಗೇಂದ್ರ ಸಿಂಗ್ ಮತ್ತು ಪ್ರಶಾಂತ್ ಭೂಷಣ್ ಇಬ್ಬರಿಂದ ಪಕ್ಷದಲ್ಲಿ ಆತಂರಿಕ ಕಲಹ ಶುರುವಾಗಿತ್ತು. ಇದರಿಂದ ಚೇತರಿಸಿಕೊಳ್ಳುತ್ತಿರುವಾಗಲೇ ಆಮ್ ಆದ್ಮಿ ಪಕ್ಷದ ಸಂಸ್ಥಾಪಕ ಅರವಿಂದ್ ಕೇಜ್ರಿವಾಲ್ ಸಚಿವ ಸಂಪುಟದ ಸಚಿವ ಜಿತೇಂದರ್ ಸಿಂಗ್ ತೊಮರ್ ಮೇಲೆ ನಕಲಿ ಕಾನೂನು ಪದವಿ ಪ್ರಮಾಣ ಪತ್ರ ಸಲ್ಲಿಸಿದ್ದಾರೆಂದು ಪ್ರತಿಪಕ್ಷಗಳು ಆರೋಪ ಮಾಡಿದ್ದು, ಈ ಕುರಿತಂತೆ ಸ್ಪಷ್ಠಿಕರಣ ನೀಡುವಂತೆ ಕೇಜ್ರಿವಾಲ್ ತೊಮರ್ ಅವರಿಗೆ ಸೂಚಿಸಿದ್ದಾರೆ.

ದೆಹಲಿ ಕಾನೂನು ಸಚಿವ ಜಿತೇಂದರ್ ಸಿಂಗ್ ತೋಮರ್ ಅವರು ಕಾನೂನು ಪದವಿ ಮಾಡಿರುವ ಕುರಿತಂತೆ ಸಲ್ಲಿಸಿರುವ ಪ್ರಮಾಣ ಪತ್ರ ನಕಲಿ ಎಂದು ಇತ್ತೀಚೆಗಷ್ಟೇ ದೆಹಲಿ ಹೈಕೋರ್ಟ್ ಹೇಳಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ, ಕಾಂಗ್ರೆಸ್ ತೊಮರ್ ರಾಜಿನಾಮೆಗೆ ಆಗ್ರಹಿಸಿವೆ.

ಈ ಆರೋಪವನ್ನು ತಳ್ಳಿಹಾಕಿದ್ದ ಜಿತೇಂದರ್ ಸಿಂಗ್ ಅವರು ನಾನು ಇದೇ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದಿದ್ದು, ನ್ಯಾಯಾಲಯ ಸ್ಪಷ್ಟೀಕರಣಕ್ಕಾಗಿ ವಿಶ್ವವಿದ್ಯಾಲಯವನ್ನು ಕೇಳಿದೆ. ವಿಶ್ವವಿದ್ಯಾಲಯವು ವಿವರಸಲ್ಲಿಸಿದ ನಂತರ ಎಲ್ಲಾ ಸತ್ಯಾಂಶಗಳು ಹೊರಬರಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT