ಬಿವಿ ಆಚಾರ್ಯ, ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಮತ್ತು ಭವಾನಿ ಸಿಂಗ್ 
ದೇಶ

ಜಯಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ವಿಶೇಷ ಅಭಿಯೋಜಕರಾಗಿ ಬಿ.ವಿ ಆಚಾರ್ಯ ನೇಮಕ

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಸರ್ಕಾರ ವಿಶೇಷ ಅಭಿಯೋಜಕ ಸ್ಥಾನದಿಂದ ಭವಾನಿ ಸಿಂಗ್ ಅವರನ್ನು ಬದಲಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಹಿರಿಯ ನ್ಯಾಯವಾದಿ ಬಿವಿ ಆಚಾರ್ಯ ಅವರನ್ನು ನೇಮಕ...

ಬೆಂಗಳೂರು: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಸರ್ಕಾರ ವಿಶೇಷ ಅಭಿಯೋಜಕ ಸ್ಥಾನದಿಂದ ಭವಾನಿ ಸಿಂಗ್ ಅವರನ್ನು ಬದಲಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಹಿರಿಯ ನ್ಯಾಯವಾದಿ ಬಿವಿ ಆಚಾರ್ಯ ಅವರನ್ನು ನೇಮಕ ಮಾಡಲಾಗಿದೆ.

ಈ ಹಿಂದೆ ಭವಾನಿ ಸಿಂಗ್​​​  ಅವರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಸಿಂಗ್ ನೇಮಕ ಕಾನೂನು ಬಾಹಿರ ಎಂದು ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಬಿವಿ ಆಚಾರ್ಯ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಈ ಹಿಂದೆ ಭವಾನಿ ಸಿಂಗ್‌ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರಾಗಿ ನೇಮಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು ಕಳೆದ ಏಪ್ರಿಲ್ 15ರಂದು ಭವಾನಿ ಸಿಂಗ್‌ ನೇಮಕದ ಬಗ್ಗೆ ತನ್ನ ತೀರ್ಪು ಪ್ರಕಟಿಸಿತ್ತು. ಜಯಲಲಿತಾ ಮತ್ತು ಅವರ ಮೂವರು ಆಪ್ತರ ಮೇಲಿನ ಪ್ರಕರಣದಲ್ಲಿ ಕರ್ನಾಟಕ ಸರ್ಕಾರಕ್ಕೆ ಮಾತ್ರ ಪ್ರಾಸಿಕ್ಯೂಷನ್‌ಗೆ ಅಧಿಕಾರವಿದೆ. ಆದರೆ ಇದರಲ್ಲಿ ತಮಿಳುನಾಡು ಸರ್ಕಾರ ಮೂಗು ತೂರಿಸಿರುವುದು ಸರಿಯಲ್ಲ. ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯ ಪೀಠಕ್ಕೆ ಕರ್ನಾಟಕ ಏ.28ರೊಳಗೆ ಲಿಖಿತ ದಾಖಲೆ ಸಲ್ಲಿಸಬೇಕು. ಆದರೆ ವಿಚಾರಣೆಯನ್ನು ಹೊಸದಾಗಿ ನಡೆಸುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT