ದೇಶ

ನೇಪಾಳದಲ್ಲಿ ದಿಢೀರ್ ಮಳೆ, ಬದುಕುಳಿದವರ ಬದುಕು ನರಕ

ಭೀಕರ ದುರಂತಕ್ಕೆ ಸಾಕ್ಷಿಯಾದ ನೇಪಾಳ ಈಗ ಅಕ್ಷರಶಃ ನರಕವಾಗಿದೆ. ಮಂಗಳವಾರ ದಿಢೀರ್ ಮಳೆ ಆರಂಭವಾಗಿದ್ದು, ಬದುಕುಳಿದವರ ಸ್ಥಿತಿ ಮತ್ತಷ್ಟು...

ಕಠ್ಮಂಡು: ಭೀಕರ ದುರಂತಕ್ಕೆ ಸಾಕ್ಷಿಯಾದ ನೇಪಾಳ ಈಗ ಅಕ್ಷರಶಃ ನರಕವಾಗಿದೆ. ಮಂಗಳವಾರ ದಿಢೀರ್ ಮಳೆ ಆರಂಭವಾಗಿದ್ದು, ಬದುಕುಳಿದವರ ಸ್ಥಿತಿ ಮತ್ತಷ್ಟು ಚಿಂತಾಜನಕವಾಗಿದೆ.

ಭೀಕರ ಭೂಕಂಪದ ಬಳಿಕ ಗಾಯಕ್ಕೆ ಉಪ್ಪು ಸವರಿದಂತೆ ಅಲ್ಲಿ ಮತ್ತೆ ಮತ್ತೆ
ಮಳೆ ಸುರಿಯುತ್ತಿದ್ದು, ಮನೆ, ಮಠ ಕಳೆದುಕೊಂಡ ಜನ ಬಯಲು ಪ್ರದೇಶದಲ್ಲಿ ಟೆಂಟ್ ಹಾಕಿಕೊಂಡು ವಾಸವಾಗಿದ್ದಾರೆ. ಮಳೆಯಿಂದ ಟೆಂಟ್ ಗಳಿಗೆಲ್ಲಾ ನೀರು ನುಗ್ಗಿ ಜನರು ಪರದಾಡುವಂತಾಗಿದೆ.

ಈ ದಿಢೀರ್ ಮಳೆಯಿಂದ ರಕ್ಷಣಾ ಕಾರ್ಯಕ್ಕೂ ತೊಡಕಾಗಿದ್ದು, ಸಂತ್ರಸ್ಥರಿಗೆ ಬೇಕಾದ ಆಹಾರ, ನೀರು, ಟೆಂಟ್ ಗಳನ್ನು ಒದಗಿಸಲು ರಕ್ಷಣಾ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಈ ಮಧ್ಯೆ ನೇಪಾಳ ಸರ್ಕಾರದ ನಿಧಾನಗತಿಯ ರಕ್ಷಣಾ ಕಾರ್ಯದ ಬಗ್ಗೆ ತೀವ್ರ ಅಕ್ರೋಶ ವ್ಯಕ್ತಪಡಿಸಿರುವ ನೇಪಾಳಿಗರು, ತಾವೇ ಅವಶೇಷಗಳಡಿಯಲ್ಲಿ ಸಿಲುಕಿರುವವರ ರಕ್ಷಣೆಗೆ ಯತ್ನಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT