ಭಗ್ನಗೊಂಡಿರುವ ದೇವಾಲಯ 
ದೇಶ

ನೇಪಾಳದಲ್ಲಿ ಭಗ್ನಗೊಂಡಿರುವ ದೇವಾಲಯಗಳ ಪುನರ್ ನಿರ್ಮಾಣ ಮಾಡ್ತೇವೆ: ವಿಎಚ್‌ಪಿ

ಪ್ರಬಲ ಭೂಕಂಪಕ್ಕೆ ನಲುಗಿರುವ ನೇಪಾಳದಲ್ಲಿ ಭಗ್ನಗೊಂಡಿರುವ ದೇವಾಲಯಗಳು ಹಾಗೂ ಮನೆಗಳ ಪುನರ್ ನಿರ್ಮಾಣ ಮಾಡುವುದಾಗಿ ವಿಶ್ವ ಹಿಂದೂ ಪರಿಷತ್(ವಿಎಚ್‌ಪಿ) ಹೇಳಿದೆ.

ನವದೆಹಲಿ: ಪ್ರಬಲ ಭೂಕಂಪಕ್ಕೆ ನಲುಗಿರುವ ನೇಪಾಳದಲ್ಲಿ ಭಗ್ನಗೊಂಡಿರುವ ದೇವಾಲಯಗಳು ಹಾಗೂ ಮನೆಗಳ ಪುನರ್ ನಿರ್ಮಾಣ ಮಾಡುವುದಾಗಿ ವಿಶ್ವ ಹಿಂದೂ ಪರಿಷತ್(ವಿಎಚ್‌ಪಿ) ಹೇಳಿದೆ.

ದೇಗುಲಗಳ ನಗರಿ ಎಂದೇ ಖ್ಯಾತಿ ಪಡೆದಿರುವ ನೇಪಾಳ ಪ್ರಕೃತಿಯ ವಿಕೋಪಕ್ಕೆ ನಲುಗಿ ಹೋಗಿದೆ. ನೊಂದ ಮನಸ್ಸುಗಳಿಗೆ ಸಾಂತ್ವನ ಹೇಳುವ ದೇಗುಲಗಳ ನಗರಿಯ ಶಾಂತಮಯ ವಾತಾವರಣವನ್ನು ಪುನರ್ ಸೃಷ್ಟಿಸುವುದಾಗಿ ವಿಎಚ್ ಪಿ ಅಂತಾರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ.

ಸಮಾಜ ಕಟ್ಟುವ ಕೆಲಸಕ್ಕೆ ಮುಂದಾಗಿರುವ ವಿಶ್ವ ಹಿಂದೂ ದೇಗುಲಗಳು, ಪ್ರಾರ್ಥನಾ ಮಂದಿರಗಳು, ಮನೆ, ಶಾಲೆ, ಸ್ಮಾರಕಗಳನ್ನು ಪುನರ್ ನಿರ್ಮಿಸುವುದರ ಜತೆಗೆ ನಿರ್ಗತಿಕ ಮಕ್ಕಳ ಭವಿಷ್ಯ ರೂಪಿಸಲು ಮುಂದಾಗಿದ್ದು, ಉಚಿತವಾಗಿ ಶಿಕ್ಷಣ ನೀಡುವುದಾಗಿ ವಿಎಚ್ ಪಿ ಘೋಷಿಸಿದೆ. ಸುಮಾರು 150ಕ್ಕೂ ಅಧಿಕ ವಸತಿ ಶಾಲೆಗಳು ಹಾಗೂ 50ಕ್ಕೂ ಅಧಿಕ ನಿರ್ಗತಿಕರ ಪುನರ್ವಸತಿ ಕೇಂದ್ರಗಳನ್ನು ಆರಂಭಿಸಲು ಯೋಜನೆ ರೂಪಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT