ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಸುಟ್ಟರೆ 5000 ದಂಡ! 
ದೇಶ

ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಸುಟ್ಟರೆ 5000 ದಂಡ!

ವಿಲೇವಾರಿ ಮಾಡದ ಕಸ ಅಥವಾ ಅನುಪಯುಕ್ತ ತ್ಯಾಜ್ಯವಸ್ತುಗಳನ್ನು ನಮ್ಮನ್ನು ಯಾರು ಕೇಳುತ್ತಾರೆ, ಯಾರು ನೋಡುವವರಿಲ್ಲ ಎಂದು ಮೊಂಡುತನದಿಂದ ಕಸವನ್ನು ಸಾರ್ವಜನಿಕ ಸ್ಥಳದಲ್ಲಿ ಸುಟ್ಟರೆ ಇನ್ನು ಮುಂದೆ 5000 ರುಪಾಯಿ ದಂಡ ತೆರಬೇಕಾಗುತ್ತದೆ...

ನವೆದೆಹಲಿ: ವಿಲೇವಾರಿ ಮಾಡದ ಕಸ ಅಥವಾ ಅನುಪಯುಕ್ತ ತ್ಯಾಜ್ಯವಸ್ತುಗಳನ್ನು ನಮ್ಮನ್ನು ಯಾರು ಕೇಳುತ್ತಾರೆ, ಯಾರು ನೋಡುವವರಿಲ್ಲ ಎಂದು ಮೊಂಡುತನದಿಂದ ಕಸವನ್ನು ಸಾರ್ವಜನಿಕ ಸ್ಥಳದಲ್ಲಿ ಸುಟ್ಟರೆ ಇನ್ನು ಮುಂದೆ 5000 ರುಪಾಯಿ ದಂಡ ತೆರಬೇಕಾಗುತ್ತದೆ.
 ಸಾರ್ವಜನಿಕರಲ್ಲಿ ತ್ಯಾಜ್ಯವಸ್ತುಗಳ ಕುರಿತಂತೆ ಜಾಗೃತಿ ಮೂಡಿಸುವ ಸಲುವಾಗಿ ದೆಹಲಿ, ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ ಹಾಗೂ ಸಾರ್ವಜನಿಕ ಇಲಾಖೆಗಳಿಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್.ಜಿ.ಟಿ) ಈ ಆದೇಶವನ್ನು ಬುಧವಾರ ಹೊರಡಿಸಿದೆ.

ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯವಸ್ತುಗಳನ್ನು ಸುಡುತ್ತಿರುವುದರಿಂದ ದೇಶದಾದ್ಯಂತ ವಾಯುಮಾಲಿನ್ಯದ ಪ್ರಮಾಣ ಹೆಚ್ಚುತ್ತಿದ್ದು, ಜನರಲ್ಲಿ ಶ್ವಾಸಕೋಶ ಸಂಬಂಧಿತ ರೋಗಗಳು ಹರಡುವುದನ್ನು ತಡೆಯುವ ಸಲುವಾಗಿ ಈ ಕ್ರಮವನ್ನು ನ್ಯಾಯಮಮಂಡಳಿ ಕೈ ಗೊಂಡಿದೆ.

ತ್ಯಾಜ್ಯ ಸುಡುವುದನ್ನು ಕಂಡ ಸಾರ್ವಜನಿಕರು ಈ ಕುರಿತಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಬಹುದು ಅಥವಾ ಇಮೇಲ್, ಫೇಸ್ ಬುಕ್ ಅಥವಾ ವಾಟ್ಸ್ ಅಪ್ ಮೂಲಕ ದೂರು ದಾಖಲಿಸಿಬಹುದು. ಸ್ಥಳೀಯ ಪ್ರದೇಶಗಳಲ್ಲಿ ಆಗುವ ಇಂತಹ ಘಟನೆಗಳಿಗೆ ಸ್ಥಳೀಯ ನಾಗರಿಕ ಅಧಿಕಾರಿಗಳು ಹಾಗೂ ಪೊಲೀಸರು ಜವಾಬ್ದಾರಿಯುತರಾಗಿದ್ದು, ದೂರು ದಾಖಲಾದ 2 ದಿನಗಳ ಒಳಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಇಲ್ಲದೇ ಹೋದಲ್ಲಿ ಅಧಿಕಾರಿಗಳು ದಂಡ ತೆರಬೇಕಾಗುತ್ತದೆ ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಆದೇಶ ಹೊರಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!