ರೈತ ಗಜೇಂದ್ರ ಸಿಂಗ್ 
ದೇಶ

ನೇಣು ಬಿಗಿದುಕೊಂಡು ರೈತ ಗಜೇಂದ್ರ ಸಿಂಗ್ ಸಾವು: ಮರಣೋತ್ತರ ವರದಿ

ರಾಜಸ್ತಾನ ರೈತ ಗಜೇಂದ್ರ ಸಿಂಗ್ ನೇಣು ಬಿಗಿದುಕೊಂಡು ಸಾವನ್ನಪ್ಪಿರುವುದು ಶವಪರೀಕ್ಷೆಯಲ್ಲಿ ದೃಢಪಟ್ಟಿದೆ.....

ನವದೆಹಲಿ: ಆಮ್ ಆದ್ಮಿ ಪಕ್ಷದ ರ್ಯಾಲಿಯಲ್ಲಿ ರಾಜಸ್ತಾನ ರೈತ ಗಜೇಂದ್ರ ಸಿಂಗ್ ನೇಣು ಬಿಗಿದುಕೊಂಡು ಸಾವನ್ನಪ್ಪಿರುವುದು ಶವಪರೀಕ್ಷೆಯಲ್ಲಿ ದೃಢಪಟ್ಟಿದೆ.
ಮಂಗಳವಾರ ಸಂಜೆ ದೆಹಲಿ ಪೊಲೀಸರು ಗಜೇಂದ್ರ ಸಿಂಗ್ ಮರಣೋತ್ತರ ವರದಿ ಪಡೆದುಕೊಂಡಿದ್ದು, ವರದಿಯಲ್ಲಿನ ಅಂಶಗಳನ್ನು ತಿಳಿಸಿದ್ದಾರೆ.
ಮರಣೋತ್ತರ ಪರೀಕ್ಷೆಯ ವರದಿ ನೀಡಿರುವ ವೈದ್ಯರು ಗಜೇಂದ್ರ ಸಿಂಗ್ ದೇಹದಲ್ಲಿ 7 ಕಡೆ ತರಚಿದ ಗಾಯಗಳಿದ್ದುದ್ದನ್ನು ಉಲ್ಲೇಖಿಸಿದ್ದಾರೆ. ಆತ ಮರದ ಮೇಲಿಂದ ಕೆಳಗೆ ಆತನ ದೇಹದ 7 ಕಡೆ ತರಚಿದ ಗಾಯಗಳಾಗಿದ್ದವು. ಎಲ್ಲಿಯೂ ಮೂಳೆ ಮುರಿತ ಆಗಿರಲಿಲ್ಲ ಎಂದು ವರದಿಯಲ್ಲಿ ದಾಖಲಿಸಿದ್ದಾರೆ.
ದೆಹಲಿ ಪೋಲೀಸರು ಗಜೇಂದ್ರ ಸಿಂಗ್ ಆತ್ಮಹತ್ಯೆ ಪ್ರಕರಣದ ತನಿಖೆ ಮುಂದುವರಿಸಿದ್ದಾರೆ. ಆಪ್ ರ್ಯಾಲಿಯಲ್ಲಿ ಕೆಲವರು ಗಜೇಂದ್ರ ಸಿಂಗ್ ಗೆ  ಆತ್ಮಹತ್ಯೆಗೆ ಪ್ರಚೋದನೆ  ನೀಡಿದ್ದರೆಂದು ಪ್ರತ್ಯಕ್ಷದರ್ಶಿಗಳು ವಿಚಾರಣೆ ವೇಳೆ ತಿಳಿಸಿದ್ದರು. ಏಪ್ರಿಲ್ 22 ರಂದು ದೆಹಲಿಯ ಜಂತರ್ ಮಂತರ್ ನಲ್ಲಿ  ಭೂಸ್ವಾಧೀನ ಮಸೂದೆ ವಿರೋಧಿಸಿ ಆಪ್ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ರೈತ ಗಜೇಂದ್ರ ಸಿಂಗ್ ಆತ್ನಹತ್ಯಗೆ ಶರಣಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!